ತ್ವರಿತ ಅಲರ್ಟ್ ಗಳಿಗಾಗಿ
For Daily Alerts
ರಾಘವೇಂದ್ರ ಮಠದ ಉತ್ತರಾಧಿಕಾರಿಯಾಗಿ ವಿದ್ವಾನ್ ಗುರುವೆಂಕಟಾಚಾರ್ಯ
ಉಡುಪಿ: ಬೆಂಗಳೂರಿನ ಪೂರ್ಣ ಪ್ರಜ್ಞ ವಿದ್ಯಾಪೀಠದ ಪ್ರಾಧ್ಯಾಪಕ ವಿದ್ವಾನ್ ಗುರುವೆಂಕಟಾಚಾರ್ಯ ಅವರನ್ನು ಮಂತ್ರಾಲಯದ ಶ್ರೀ ರಾಘವೇಂದ್ರ ಮಠದ ಉತ್ತರಾಧಿಕಾರಿಯಾಗಿ ಘೋಷಿಸಲಾಗಿದೆ.
ರಾಘವೇಂದ್ರ ಮಠಾಧೀಶ ಸುಶಮೀಂದ್ರ ತೀರ್ಥ ಶ್ರೀಪಾದ ಅವರು ಬುಧವಾರ ಈ ಘೋಷಣೆ ಮಾಡಿರುವುದಾಗಿ ಮಠದ ಮಾಧ್ಯಮ ಪ್ರಕಟಣೆ ತಿಳಿಸಿದೆ. ವಿದ್ವಾನ್ ಗುರುವೆಂಕಟಾಚಾರ್ಯ ಅವರು ಪೂರ್ಣ ಪ್ರಜ್ಞ ವಿದ್ಯಾಪೀಠದಲ್ಲಿ ಸುಮಾರು 12 ವರ್ಷಗಳ ಕಾಲ ವಿದ್ಯಾಭ್ಯಾಸ ಮಾಡಿದ್ದಾರೆ.
ತಮ್ಮ ಏಳನೇ ವಯಸ್ಸಿನಲ್ಲಿಯೇ ಉಡುಪಿಯ ಅಷ್ಟ ಮಠಗಳಲ್ಲಿ ಒಂದಾದ ಫಲಿಮಾರು ಮಠದ ಹಿರಿಯ ಸ್ವಾಮೀಜಿ ಶ್ರೀ ವಿದ್ಯಾಮಾನ್ಯ ತೀರ್ಥರ ಬಳಿ ವಿದ್ಯಾರ್ಜನೆ ಮಾಡಿದ್ದರು. ಗುರು ವೆಂಕಟಾಚಾರ್ಯರು ಸಂಸ್ಕೃತದಲ್ಲಿ ಎಂ.ಎ. ಪದವಿ ಪಡೆದಿದ್ದಾರೆ.
(ಇನ್ಫೋ ವಾರ್ತೆ)
ಮುಖಪುಟ / ಇವತ್ತು... ಈ ಹೊತ್ತು...
Comments
Story first published: Thursday, April 4, 2002, 5:30 [IST]