ತ್ವರಿತ ಅಲರ್ಟ್ ಗಳಿಗಾಗಿ
For Daily Alerts
ಮೂಡಬಿದ್ರೆ ಚರ್ಚ್ ದಾಳಿ ಪ್ರಕರಣ : ಮೂವರು ಆರೋಪಿಗಳ ಬಂಧನ
ಮಂಗಳೂರು : ಭಾನುವಾರ ಮೂಡಬಿದ್ರೆಯ ಚರ್ಚ್ ಮೇಲೆ ನಡೆದ ದಾಳಿಗೆ ಸಂಬಂಧಿಸಿದಂತೆ ಪೊಲೀಸರು ಸೋಮವಾರ ಮೂವರನ್ನು ಬಂಧಿಸಿದ್ದಾರೆ.
ರಿಚರ್ಡ್ ಡಿಸೋಜ ಎಂಬುವರ ಮನೆಗೆ ಹೊಂದಿಕೊಂಡಿದ್ದ ಪ್ರಾರ್ಥನಾ ಮಂದಿರದ ಮೇಲೆ ದುಷ್ಕರ್ಮಿಗಳು ಭಾನುವಾರ ಕಲ್ಲು ತೂರಿದ್ದರು. ಬಂಧಿತ ಆರೋಪಿಗಳನ್ನು ನ್ಯಾಯಾಂಗ ವಶಕ್ಕೆ ಒಪ್ಪಿಸಲಾಗಿದ್ದು, ಈ ಪ್ರಕರಣಕ್ಕೆ ಕಾರಣರಾಗಿರುವ ಇನ್ನಷ್ಟು ದುಷ್ಕರ್ಮಿಗಳ ಸುಳಿವನ್ನು ಇವರು ನೀಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಪ್ರಾರ್ಥನಾ ಮಂದಿರದ ಸುತ್ತ ಬಿಗಿ ಪೊಲೀಸ್ ಬಂದೋಬಸ್ತ್ ನಿಯೋಜಿಸಲಾಗಿದೆ.
(ಪಿಟಿಐ)
ವಾರ್ತಾ
ಸಂಚಯ
ಮುಖಪುಟ
/
ಇವತ್ತು...
ಈ
ಹೊತ್ತು...
Comments
Story first published: Monday, April 15, 2002, 5:30 [IST]