ಬಿಟಿ ಹತ್ತಿ ನಿಷೇಧಿಸದಿದ್ದಲ್ಲಿ ದೇಶವ್ಯಾಪೀ ಚಳವಳಿ-ನಂಜುಂಡಸ್ವಾಮಿ ಎಚ್ಚರಿಕೆ
ಧಾರವಾಡ: ಬಿಟಿ ಹತ್ತಿ ಸೇರಿದಂತೆ ಏಕಬೆಳೆ ಬೀಜಗಳನ್ನು ನಿಷೇಧಿಸದೇ ಇದ್ದಲ್ಲಿ ದೇಶಾದ್ಯಂತ ಬಹೃತ್ ಚಳವಳಿ ನಡೆಸುವುದಾಗಿ ಉತ್ತರ ಪ್ರದೇಶ, ಕರ್ನಾಟಕ ಮತ್ತು ತಮಿಳುನಾಡಿನ ರೈತಮುಖಂಡರು ಸರಕಾರಕ್ಕೆ ಧಮಕಿ ಹಾಕಿದ್ದಾರೆ.
ಉತ್ತರಪ್ರದೇಶದ ರೈತ ಮುಖಂಡ ಮಹೇಂದ್ರ ಸಿಂಗ್ ಟಿಕಾಯತ್,ಇ ತಮಿಳುನಾಡಿನ ರೈತ ನಾಯಕ ಸೆಲ್ವ ಮುತ್ತು ಹಾಗೂ ಕನಾಂಟಕ ರಾಜ್ಯ ರೈತ ಸಂಘದ ಅಧ್ಯಕ್ಷ ಪ್ರೊ. ಎಂ.ಡಿ. ನಂಜುಡ ಸ್ವಾಮಿ ಬುಧವಾರ ಏಕಬೆಳೆ ಬೀಜಗಳ ಬಗ್ಗೆ ಸರಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.
ಉತ್ತರ ಪ್ರದೇಶ, ಹರಿಯಾಣ ರಾಜಸ್ಥಾನ ಹಾಗೂ ತಮಿಳುನಾಡಿನಲ್ಲಿ ಬಿಟಿ ಹತ್ತಿಗೆ ಪ್ರವೇಶವಿಲ್ಲ. ಅಲ್ಲಿನ ಕೃಷಿ ಸಚಿವರು ಹಾಗೂ ಅಧಿಕಾರಿಗಳು ಈ ಹತ್ತಿ ತಳಿಯ ವಿರುದ್ಧ ದನಿ ಎತ್ತಿದ್ದಾರೆ. ಆದರೆ ಕರ್ನಾಟಕದಲ್ಲಿ ಮಾತ್ರ ಸರಕಾರ ಬಿಟಿ ಹತ್ತಿಗೆ ರತ್ನಗಂಬಳಿ ಹಾಸಿ ಬರಮಾಡಿಕೊಳ್ಳುತ್ತಿದೆ. ಇದರ ವಿರುದ್ಧ ನಾವು ರಾಷ್ಟ್ರವ್ಯಾಪೀ ಚಳವಳಿ ನಡೆಸುತ್ತೇವೆ ಎಂದು ಸಂಯುಕ್ತ ಸುದ್ದಿಗೋಷ್ಠಿಯಲ್ಲಿ ಮೂರು ರಾಜ್ಯದ ನಾಯಕರು ತಿಳಿಸಿದ್ದಾರೆ.
ರಾಜ್ಯದ ಎಲ್ಲ ರೈತರು ಏಕ ಬೆಳೆ ಬೀಜಗಳನ್ನು ಬಳಸಬಾರದು ಎಂದು ಮನವಿ ಮಾಡಿಕೊಂಡ ನಂಜುಂಡ ಸ್ವಾಮಿ ಏಕ ಬೆಳೆ ಬೀಜಗಳ ಬಿತ್ತುವ ರೈತರ ಹೊಲಕ್ಕೆ ಬೆಂಕಿ ಇಡಲಾಗುವುದು. ರಾಯಚೂರು, ಕೊಪ್ಪಳ, ಶಿವಮೊಗ್ಗ ಮತ್ತಿತರ ಕಡೆಗಳಲ್ಲಿ ಮೊನ್ಸಾಂಟೋ ಬಿಟಿ ಹತ್ತಿ ಸುಡುವ ಕಾರ್ಯ ಮುಂದುವರೆದಿದ್ದು, ಇಂತಹ ಅಪಾಯಕಾರಿ ಬೀಜಗಳನ್ನು ಮಾರಾಟ ಮಾಡುವ ಅಂಗಡಿಗಳ ಮೇಲೆ ಧಾಳಿ ನಡೆಸಲಾಗುವುದು, ಇದು ರೈತ ಸಂಘದ ಕಡೆಯ ಎಚ್ಚರಿಕೆ ಎಂದು ಗುಡುಗಿದರು.
(ಇನ್ಫೋ ವಾರ್ತೆ)
ಮುಖಪುಟ / ಇವತ್ತು... ಈ ಹೊತ್ತು...
-
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Karnataka Weather: ಇಂದು ರಾಜ್ಯದ ಹಲವೆಡೆ ಗುಡುಗು ಸಹಿತ ಅಕಾಲಿಕ ಮಳೆ, ಬೆಂಗಳೂರಿನಲ್ಲಿ ಹೇಗಿರಲಿದೆ ವಾತಾವರಣ? -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
Udaan Yatri Cafe: ಏರ್ಪೋರ್ಟ್ನಲ್ಲಿ ದುಬಾರಿ ಊಟಕ್ಕೆ ಬ್ರೇಕ್: 17 ಕಡೆ ಉಡಾನ್ ಕೆಫೆ ಆರಂಭ -
ಖಾಸಗಿ ಬಸ್ಗಳಿಗಾಗಿ ಹುಬ್ಬಳ್ಳಿ-ಮುಂಬೈ ಮಾರ್ಗದಲ್ಲಿ NWKRTC ಸಂಚಾರ ಸ್ಥಗಿತ? ನೆಟ್ಟಿಗರ ಆಕ್ರೋಶ












Click it and Unblock the Notifications