ಚಿಕ್ಕನಾಯಕನ ಹಳ್ಳಿಯಲ್ಲಿ ಜೆಲೆಟಿನ್ ಸ್ಫೋಟಕ್ಕೆ13 ಮಂದಿ ಬಲಿ
ತುಮಕೂರು : ಜೆಲ್ಲಿಗೆಂದು ಭಾರೀ ಬಂಡೆಯಾಂದನ್ನು ಸ್ಫೋಟಿಸಲು ಜೀಪ್ನಲ್ಲಿ ತಂದಿದ್ದ ಜೆಲೆಟಿನ್ ಸ್ಫೋಟಗೊಂಡ ಪರಿಣಾಮ 13 ಮಂದಿ ಸ್ಥಳದಲ್ಲೇ ಮೃತರಾದ ದುರಂತ ಚಿಕ್ಕನಾಯಕನ ಹಳ್ಳಿಯಲ್ಲಿ ನಡೆದಿದೆ.
ಎನ್.ಎ.ಪಿ.ಸಿ. ಸಂಸ್ಥೆ , ಹುಳಿಯಾರ್ನಿಂದ ಕೆ.ಬಿ.ಕ್ರಾಸ್ ರಸ್ತೆವರೆಗೆ ರಸ್ತೆ ಅಗಲಗೊಳಿಸಿ ಟಾರ್ ಹಾಕುವುದಕ್ಕಾಗಿ ಅಂಕನ ಬಾವಿ ಬಳಿಯಿರುವ ತಾರೀಕಟ್ಟೆ ತಾಂಡದಲ್ಲಿ ಕ್ರಷರ್ ಯೂನಿಟ್ ಹಾಕಿಕೊಂಡಿದ್ದರು. ಜೆಲ್ಲಿ ಕಲ್ಲುಗಳಿಗಾಗಿ ಭಾರೀ ಬಂಡೆಯಾಂದನ್ನು ಸ್ಫೋಟಿಸಲು ತುಮಕೂರಿನಿಂದ ಜೀಪ್ನಲ್ಲಿ ಜೆಲೆಟಿನ್ ಸ್ಫೋಟಕವನ್ನು ತಂದು ಕೊಠಡಿಯಾಂದರಲ್ಲಿ ದಾಸ್ತಾನುಗೊಳಿಸಲು ಇಳಿಸುತ್ತಿದ್ದಾಗ ನಡೆದ ಅಕಸ್ಮಿಕ ಸ್ಫೋಟದಿಂದ ಈ ದುರಂತ ಸಂಭವಿಸಿದೆ.
ಘಟನೆಯಲ್ಲಿ 13 ಮಂದಿ ಸ್ಥಳದಲ್ಲೇ ಸಜೀವ ದಹನವಾಗಿದ್ದರೆ, 22ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯಗಳಾಗಿವೆ. ಮೃತರ ಪೈಕಿ ಚಂದ್ರನಾಯಕ, ಕುಮಾರ್ ನಾಯಕ್, ಗೋಪಾಲ್ ನಾಯಕ, ಶಾಮನಾಯಕ್, ಶ್ಯಾಮ್ಯ ನಾಯಕ್, ಬಸವರಾಜ್, ದೊಡ್ಡಬಿದಿರೆಯ ಮೌಲಿ, ನಂಜುಂಡ ನಾಯ್ಕ ಅವರನ್ನು ಗುರುತಿಸಲಾಗಿದೆ.
ಗಾಯಗೊಂಡವರಲ್ಲಿ, ಸಿದ್ಧರಾಮಯ್ಯ(35), ರೇಶ್ಮಾ(10), ನಾಸಿರ್ ಹುಸೇನ್(18) ಜೀವನ್ಮರಣ ಸ್ಥಿತಿಯಲ್ಲಿರುವುದಾಗಿ ಆಸ್ಪತ್ರೆಯ ಮೂಲಗಳು ತಿಳಿಸಿವೆ. ಹಂದನ ಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣವನ್ನು ದಾಖಲಿಸಿಕೊಳ್ಳಲಾಗಿದೆ.
(ಇನ್ಫೋ ವಾರ್ತೆ)
ಮುಖಪುಟ / ಇವತ್ತು... ಈ ಹೊತ್ತು...
-
Dhurandhar 2 Pakistan: ಅರಬ್ ರಾಷ್ಟ್ರದ ಸಾಲ ತೀರಿಸಲು ದುರಂಧರ್ 2 ಬಿಡುಗಡೆಗೆ ಮುಂದಾಯ್ತಾ ಪಾಕಿಸ್ತಾನ, ಟ್ವಿಸ್ಟ್ -
Lata Mangeshkar & Asha Bhosle: ಆ ಒಂದು ಕಾರಣಕ್ಕೆ ತಂಗಿ ಆಶಾ ಬೋಸ್ಲೆ ಜೊತೆ ಮಾತು ಬಿಟ್ಟಿದ್ದ ಲತಾ ಮಂಗೇಶ್ಕರ್ -
Karntaka Weather: ಹವಾಮಾನ ವೈಪರೀತ್ಯ! ರಾಜ್ಯದ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ -
ಗಂಡ-ಹೆಂಡತಿ ಜಗಳ ಇಡೀ ದಿನ ತೋರಿಸಿದರೆ ಸಮಾಜಕ್ಕೆ ಏನು ಪ್ರಯೋಜನ: ಮಾಧ್ಯಮಗಳಿಗೆ ಸಿಎಂ ಪ್ರಶ್ನೆ -
Gas Booking New Rules: ಎಲ್ಪಿಜಿ ಗ್ಯಾಸ್ ಬುಕ್ಕಿಂಗ್ನಲ್ಲಿ ಹೊಸ ನಿಯಮ, ಎಷ್ಟು ದಿನಕ್ಕೆ ಸಿಗುತ್ತೆ ಗ್ಯಾಸ್ ಸಿಲಿಂಡರ್ -
ಮೈಸೂರು-ಬೆಂಗಳೂರು ರೈಲು ಪ್ರಯಾಣಿಕರಿಗೆ ಗುಡ್ನ್ಯೂಸ್ ಕೊಟ್ಟ ವಿ.ಸೋಮಣ್ಣ -
'ಕೋಟಿಗೊಬ್ಬ' ರೀರಿಲೀಸ್: ವಿಷ್ಣುದಾದಾ ಅಭಿಮಾನಿಗಳಿಂದ ಸಂಭ್ರಮ, ಪ್ರಸನ್ನ ಥಿಯೇಟರ್ನಲ್ಲಿ ನಾಳೆ 10,000 ಮಂದಿಗೆ ನಾನ್ವೆಜ್ ಊಟ -
Ram Gopal Varma: ದಾವೂದ್ ಇಬ್ರಾಹಿಂ ಇಲ್ಲದಿದ್ದರೆ ನಾನು ಬದುಕು ಕಟ್ಟಿಕೊಳ್ಳುತ್ತಿರಲಿಲ್ಲ: ನಿರ್ದೇಶಕ ರಾಮ್ ಗೋಪಾಲ್ ವರ್ಮಾ -
Smriti Mandhana: ಸ್ಮೃತಿ ಮಂಧಾನ-ಪಲಾಶ್ ಮುಚ್ಚಲ್ ಮತ್ತೆ ಒಂದಾಗ್ತಾರಾ? ಇಬ್ಬರ ಕುಟುಂಬಗಳ ಸೀಕ್ರೆಟ್ ಮೀಟಿಂಗ್ ವಿಡಿಯೋ ವೈರಲ್ -
Asha Bhosle Kannada Songs: ಆಶಾ ಭೋಸ್ಲೆ ಹಾಡಿದ ಕನ್ನಡದ ಹಾಡುಗಳು: ಕರ್ನಾಟಕದ ಜನರ ಮನ ಗೆದ್ದ ಖ್ಯಾತ ಗಾಯಕಿ -
Government Schools: ಈ ವರ್ಷದಿಂದಲೇ ಸರ್ಕಾರಿ ಶಾಲೆಗಳಲ್ಲಿ ದ್ವಿಭಾಷಾ ನೀತಿ: ಎಲ್ಲ ಶಿಕ್ಷಕರಿಗೆ ಇಂಗ್ಲಿಷ್ ಟ್ರೈನಿಂಗ್ -
Arecanut Price: ದಾವಣಗೆರೆ ಮಾರುಕಟ್ಟೆಯಲ್ಲಿ ಅಡಿಕೆ ಧಾರಣೆ ಭರ್ಜರಿ ಏರಿಕೆ: ಇಲ್ಲಿದೆ ಏಪ್ರಿಲ್ 11ರ ದರಪಟ್ಟಿ












Click it and Unblock the Notifications