ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ವಿಧಾನಸೌಧದ ಮುಂದೆ ಸಂಯುಕ್ತ ಜನತಾ ದಳ ಮುಖಂಡರ ಭಾರೀ ಪ್ರತಿಭಟನೆ

By Staff
|
Google Oneindia Kannada News

ಬೆಂಗಳೂರು : ಸಂಯುಕ್ತ ಜನತಾ ದಳದ ಕರ್ನಾಟಕ ಘಟಕದ ಅಧ್ಯಕ್ಷ ಸಿ.ಭೈರೇಗೌಡ, ಮಾಜಿ ಸಚಿವರಾದ ಬಿ.ಸೋಮಶೇಖರ್‌ ಮತ್ತು ಪಿ.ಜಿ.ಆರ್‌.ಸಿಂಧ್ಯ ಸೇರಿದಂತೆ ವಿಧಾನಸೌಧದ ಮುಂದೆ ಪ್ರತಿಭಟನೆ ನಡೆಸುತ್ತಿದ್ದ 50 ಸಂಯುಕ್ತ ಜನತಾ ದಳದ ಮುಖಂಡರನ್ನು ಪೊಲೀಸರು ಮಂಗಳವಾರ ಬಂಧಿಸಿ, ಬಿಡುಗಡೆ ಮಾಡಿದ್ದಾರೆ.

ಕೃಷಿ ಸಾಲದ ಬಡ್ಡಿಯನ್ನು ಮನ್ನಾ ಮಾಡಬೇಕು, ಅಕ್ರಮ ವಿದ್ಯುತ್‌ ಸಂಪರ್ಕಗಳನ್ನು ಸಕ್ರಮಗೊಳಿಸಲು ಗಡುವನ್ನು ಜೂನ್‌ 30ವರೆಗೆ ವಿಸ್ತರಿಸಬೇಕು, ಬಿತ್ತನೆ ಬೀಜಗಳು ಮತ್ತು ರಾಸಾಯನಿಕ ಗೊಬ್ಬರಗಳನ್ನು ಉಚಿತವಾಗಿ ಪೂರೈಸಬೇಕು ಎಂಬುವು ಸಂಯುಕ್ತ ಜನತಾ ದಳ ನಾಯಕರ ಬೇಡಿಕೆಗಳು.

ರಾಜ್ಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಹದಗೆಟ್ಟಿದೆ. ಅದನ್ನು ಸರಿ ಪಡಿಸುವಲ್ಲಿ ಸರ್ಕಾರ ವಿಫಲವಾಗಿದೆ ಎಂದೂ ಪ್ರತಿಭಟನಾಕಾರರು ಘೋಷಣೆಗಳನ್ನು ಕೂಗುತ್ತಿದ್ದರೆಂದು ಪೊಲೀಸರು ತಿಳಿಸಿದ್ದಾರೆ.

(ಪಿಟಿಐ)

ಮುಖಪುಟ / ಇವತ್ತು... ಈ ಹೊತ್ತು...

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X