ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಹಿರಿಯೂರು ಸಮೀಪ ಬಸ್ಸು-ಲಾರಿ ಡಿಕ್ಕಿ, ಐವರ ದುರ್ಮರಣ

By Staff
|
Google Oneindia Kannada News

ಬೆಂಗಳೂರು : ಚಿತ್ರದುರ್ಗ ಜಿಲ್ಲೆಯ ಹಿರಿಯೂರು ಬಳಿ ಸೋಮವಾರ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಐದು ಮಂದಿ ದುರ್ಮರಣಕ್ಕೀಡಾಗಿದ್ದಾರೆ.

ಖಾಸಗಿ ಐಷಾರಾಮಿ ಬಸ್ಸು ಹಾಗೂ ಲಾರಿ ನಡುವೆ ಸೋಮವಾರ ಬೆಳಗ್ಗೆ ಸಂಭವಿಸಿದ ಡಿಕ್ಕಿಯಲ್ಲಿ ಈ ಅಪಘಾತ ಸಂಭವಿಸಿದೆ. ಸಾವಿಗೀಡಾದ ಐದು ಮಂದಿಯಲ್ಲಿ ಮೂವರು ಬಸ್ಸಿನ ಪ್ರಯಾಣಿಕರಾದರೆ, ಉಳಿದ ಇಬ್ಬರು ಲಾರಿಯಲ್ಲಿದ್ದವರು ಎಂದು ಪೊಲೀಸ್‌ ಮೂಲಗಳು ಹೇಳಿವೆ.

ಬಸ್ಸು- ಲಾರಿ ಅಪಘಾತದಲ್ಲಿ ಹಲವಾರು ಮಂದಿ ಗಾಯಗೊಂಡಿದ್ದಾರೆ. ಹತ್ತಿರದ ಆಸ್ಪತ್ರೆಗೆ ಗಾಯಾಳುಗಳನ್ನು ಚಿಕಿತ್ಸೆಗಾಗಿ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
(ಪಿಟಿಐ)

ಮುಖಪುಟ / ಇವತ್ತು... ಈ ಹೊತ್ತು...

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X