ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಮೈಸೂರಿನಲ್ಲಿ ಮೇ 11ರಂದು ನಿಡುಮಾಮಿಡಿ ಸ್ವಾಮೀಜಿ ನಿಧಿ ಸಮರ್ಪಣೆ

By Staff
|
Google Oneindia Kannada News

ಬೆಂಗಳೂರು : ನಿಡುಮಾಮಿಡಿ ಮಠಾಧೀಶ ವೀರಭದ್ರ ಚನ್ನಮಲ್ಲ ಸ್ವಾಮೀಜಿಯವರ ಅಭಿಮಾನಿ ಭಕ್ತ ವೃಂದ, ಅವರು ಗಡಿನಾಡಿನಲ್ಲಿ ನಡೆಸುತ್ತಿರುವ ವಿದ್ಯಾದಾನಕ್ಕೆ ನೆರವಾಗಲು ನಿರ್ಧರಿಸಿದೆ.

ಈ ಹಿನ್ನೆಲೆಯಲ್ಲಿ ಮೇ 11ರಂದು 50 ಲಕ್ಷ ರೂಪಾಯಿ ನಿಧಿ ಸಮರ್ಪಣಾ ಕಾರ್ಯಕ್ರಮವನ್ನು ಮೈಸೂರಿನಲ್ಲಿ ಆಯೋಜಿಸಲಾಗಿದೆ. ವೀರಭದ್ರ ಚನ್ನ ಮಲ್ಲ ಸ್ವಾಮೀಜಿ ನಿಧಿ ಸಮರ್ಪಣಾ ಸಮಿತಿಯ ಅಧ್ಯಕ್ಷ ಪರಮೇಶ್ವರಪ್ಪ ಈ ವಿಷಯವನ್ನು ಬುಧವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. ಗಡಿನಾಡಿನ ಕುಗ್ರಾಮಗಳಲ್ಲಿ ಸ್ವಾಮೀಜಿ 60 ಶಾಲೆಗಳನ್ನು ನಡೆಸುತ್ತಿದ್ದಾರೆ.

ಅಷ್ಟೇನೂ ಸಂಪನ್ಮೂಲವಿಲ್ಲದ ಮಠದ ವತಿಯಿಂದ 500 ವಿದ್ಯಾರ್ಥಿಗಳಿಗೆ ಉಚಿತ ಊಟ ವಸತಿ ಮತ್ತು ಶಿಕ್ಷಣವನ್ನು ಒದಗಿಸುತ್ತಿದ್ದಾರೆ. ಹಲವು ಅನಾಥಾಲಯ, ವೃದ್ಧಾಶ್ರಮ, ಶಿಶುಪಾಲನಾ ಕೇಂದ್ರಗಳನ್ನು ನಡೆಸುತ್ತಿದ್ದಾರೆ. ಮಠದ ಈ ಯೋಜನೆಗಳಿಗೆ ನೆರವಾಗುವುದು ನಮ್ಮ ಕರ್ತವ್ಯ ಎಂದು ನಾವು ಭಾವಿಸಿದ್ದೇವೆ ಎಂದು ಪರಮೇಶ್ವರಪ್ಪ ಹೇಳಿದರು.

ಮೈಸೂರಿನ ಕಲಾಮಂದಿರದಲ್ಲಿ ಮಾಜಿ ಪ್ರಧಾನಿ ಎಚ್‌. ಡಿ. ದೇವೇಗೌಡ ಅವರು ಸ್ವಾಮೀಜಿಗೆ 50 ಲಕ್ಷ ರೂಪಾಯಿಗಳ ಚೆಕ್‌ ಸಮರ್ಪಿಸುವರು. ಇದೇ ಸಂದರ್ಭದಲ್ಲಿ ಸ್ವಾಮೀಜಿಯವರ ವಿಚಾರ ಧಾರೆಗಳ ಬಗ್ಗೆ ಉಪನ್ಯಾಸ ಕಾರ್ಯಕ್ರಮವನ್ನೂ ಆಯೋಜಿಸಲಾಗಿದೆ.

(ಇನ್ಫೋ ವಾರ್ತೆ)

ಮುಖಪುಟ / ಇವತ್ತು... ಈ ಹೊತ್ತು...

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X