ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಮೈಸೂರಿನ ಎಸ್‌. ಪಟ್ಟಾಭಿರಾಮನ್‌ ಅವರಿಗೆ ಖಾದ್ರಿ ಶಾಮಣ್ಣ ಪ್ರಶಸ್ತಿ

By Staff
|
Google Oneindia Kannada News

ಬೆಂಗಳೂರು : ಮೈಸೂರಿನ ಹಿರಿಯ ಪತ್ರಕರ್ತ ಎಸ್‌. ಪಟ್ಟಾಭಿರಾಮನ್‌ ಅವರನ್ನು ಈ ವರ್ಷದ ಖಾದ್ರಿ ಶಾಮಣ್ಣ ಪತ್ರಿಕೋದ್ಯಮ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.

ಕನ್ನಡ ಪತ್ರಿಕೋದ್ಯಮದಲ್ಲಿ ಭಾಷಾಂತರ, ಸುದ್ದಿ ಸಂಪಾದನೆ, ಭಾಷಾ ಸಂಪತ್ತು ವೃದ್ಧಿಯಲ್ಲಿ ಪಟ್ಟಾಭಿರಾಮನ್‌ ಅವರ ಕೊಡುಗೆ ಗಮನಿಸಿ ಈ ಪ್ರಶಸ್ತಿಗೆ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಪತ್ರಕರ್ತ ಎಂ. ಕೆ. ಭಾಸ್ಕರ ರಾವ್‌ ಹಾಗೂ ಶ್ರೀಶ ಅವರನ್ನೊಳಗೊಂಡ ಆಯ್ಕೆ ಸಮಿತಿ ತಿಳಿಸಿದೆ.

ಪ್ರಶಸ್ತಿಯು ಹತ್ತು ಸಾವಿರ ರೂಪಾಯಿ ನಗದು, ಬಿನ್ನವತ್ತಳೆ ಹಾಗೂ ಅಭಿನಂದನಾ ಪತ್ರವನ್ನೊಳಗೊಂಡಿದೆ. ಜೂನ್‌ 6ರಂದು ಮೈಸೂರಿನಲ್ಲಿ ನಡೆಯಲಿರುವ ಖಾದ್ರಿ ಶಾಮಣ್ಣ ಜನ್ಮ ದಿನ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಖಾದ್ರಿ ಶಾಮಣ್ಣ ಸ್ಮಾರಕ ಟ್ರಸ್ಟ್‌ ತಿಳಿಸಿದೆ.

(ಇನ್ಫೋ ವಾರ್ತೆ)

ಮುಖಪುಟ / ಇವತ್ತು... ಈ ಹೊತ್ತು...

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X