ನರಸಿಂಹರಾಜ ವಿಧಾನಸಭಾ ಉಪಚುನಾವಣೆಯಲ್ಲಿ ಕಾಂಗ್ರೆಸ್ ಮೇಲುಗೈ
ಮೈಸೂರು: ಕಾಂಗ್ರೆಸ್ ಹಾಗೂ ಜನತಾ ಪರಿವಾರಗಳ ಪ್ರತಿಷ್ಠೆಯ ವಿಷಯವಾಗಿದ್ದ ನರಸಿಂಹ ರಾಜ ವಿಧಾನ ಸಭಾ ಉಪ ಚುನಾವಣೆಯಲ್ಲಿ ಆಡಳಿತ ಪಕ್ಷ ಕಾಂಗ್ರೆಸ್ ಜಯಭೇರಿ ಭಾರಿಸಿದೆ.
ಕಾಂಗ್ರೆಸ್ನ ಅಭ್ಯರ್ಥಿ ತನ್ವೀರ್ ಸೇಠ್ ಎದುರಾಳಿ ಜನತಾ ಪರಿವಾರದ ಅಭ್ಯರ್ಥಿಯನ್ನು 11,700 ಮತಗಳ ಅಂತರದಿಂದ ಸೋಲಿಸಿದ್ದಾರೆ. ತನ್ವೀರ್ 41,453 ಮತಗಳನ್ನು ಗಿಟ್ಟಿಸಿಕೊಂಡಿದ್ದರೆ, ಜನತಾ ಪರಿವಾರದ ಅಭ್ಯರ್ಥಿ ಮಾರುತಿ ರಾವ್ಪವಾರ್ 29, 744 ಮತಗಳನ್ನು ಪಡೆದುಕೊಂಡಿದ್ದಾರೆ. ಬಿಜೆಪಿಯ ಬಿ.ಟಿ. ಮಂಜುನಾಥ್ ಅವರಿಗೆ 8,703 ಮತ ಲಭಿಸಿದೆ.
ಮಾಜಿ ಸಚಿವ ಅಜೀಜ್ ಸೇಠ್ ಅವರ ನಿಧನದಿಂದ ನರಸಿಂಹ ರಾಜ ವಿಧಾನ ಸಭಾ ಕ್ಷೇತ್ರ ತೆರವಾಗಿದ್ದರಿಂದ ಉಪಚುನಾವಣೆ ನಡೆಸಬೇಕಾಗಿಯಿತು. ಚುನಾವಣ ವಿಷಯ ಕಾಂಗ್ರೆಸ್ ಹಾಗೂ ಜನತಾ ಪರಿವಾರದ ನಡುವೆ ಪ್ರತಿಷ್ಠೆಯ ಪ್ರಶ್ನೆಯಾಗಿತ್ತು. ಮಾಜಿ ಪ್ರಧಾನಿ ಎಚ್. ಡಿ. ದೇವೇಗೌಡ ಅವರು ಒಂದು ವಾರಗಳ ಕಾಲ, ಪವಾರ್ ಪರವಾಗಿ ಪಾದಯಾತ್ರೆ ಮಾಡಿ ಚುನಾವಣಾ ಪ್ರಚಾರ ಮಾಡಿದ್ದರು. ಕಾಂಗ್ರೆಸ್ ಪರವಾಗಿ ಮುಖ್ಯ ಮಂತ್ರಿ ಎಸ್. ಎಂ. ಕೃಷ್ಣ ಎರಡು ದಿನಗಳ ಕಾಲ ಚುನಾವಣಾ ಪ್ರಚಾರ ಮಾಡಿದ್ದರು.
(ಪಿಟಿಐ)
ಮುಖಪುಟ / ಇವತ್ತು... ಈ ಹೊತ್ತು...