ತ್ವರಿತ ಅಲರ್ಟ್ ಗಳಿಗಾಗಿ
For Daily Alerts
ಮುಂದಿನ ಶೈಕ್ಷಣಿಕ ವರ್ಷದಿಂದ ಕಾನ್ವೆಂಟ್ಗೂ ಸಿಇಟಿ : ವಿಶ್ವನಾಥ್
ಮೈಸೂರು : ಬರುವ ಶೈಕ್ಷಣಿಕ ವರ್ಷದಿಂದ ರಾಜ್ಯದ ಎಲ್ಲಾ ಖಾಸಗಿ ಕಾನ್ವೆಂಟ್, ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಲ್ಲಿ ಸಾಮಾನ್ಯ ಪ್ರವೇಶ ಪರೀಕ್ಷೆ ನಡೆಸಲು ಸರ್ಕಾರ ಚಿಂತಿಸುತ್ತಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಚ್.ವಿಶ್ವನಾಥ್ ಮಂಗಳವಾರ ಹೇಳಿದರು.
ಜಿಲ್ಲಾ ಪಂಚಾಯಿತಿ ಸ್ಥಾಯಿ ಸಮಿತಿಗಳ ಚುನಾವಣೆಯ ನಂತರ ಅವರು ಸುದ್ದಿಗಾರರೊಡನೆ ಮಾತಾಡುತ್ತಿದ್ದರು. ಹೊಸದಾಗಿ ಪ್ರವೇಶ ಮಾಡಿಕೊಳ್ಳುವ ವಿದ್ಯಾರ್ಥಿಗಳ ಹೆಸರನ್ನು ಬಹಿರಂಗವಾಗಿ ಪ್ರಕಟಿಸುವುದು ಮೊದಲಾದ ನಿಯಮಗಳನ್ನು ಈಗಾಗಲೇ ಜಾರಿಗೆ ತಂದಿರುವುದು ಜನರ ಮೆಚ್ಚುಗೆಗೆ ಪಾತ್ರವಾಗಿದೆ. ಇದಲ್ಲದೆ ಪ್ರವೇಶ ಪರೀಕ್ಷೆಯನ್ನೂ ನಡೆಸಿ, ಶಾಲೆಗಳಿಗೆ ವಿದ್ಯಾರ್ಥಿಗಳನ್ನು ಸೇರಿಸಿಕೊಳ್ಳುವುದರಿಂದ ಅರ್ಹ ವಿದ್ಯಾರ್ಥಿಗಳಿಗೆ ಪ್ರವೇಶ ಗಿಟ್ಟುತ್ತದೆ. ಜೊತೆಗೆ ವಂತಿಗೆ ವಸೂಲಿ ನೆಪದಲ್ಲಿ ಸಿಕ್ಕಾಪಟ್ಟೆ ಹಣ ಹೊಡೆಯುವುದು ತಪ್ಪುತ್ತದೆ ಎಂದರು.
(ಇನ್ಫೋ ವಾರ್ತೆ)
ಮುಖಪುಟ / ಇವತ್ತು... ಈ ಹೊತ್ತು...
Comments
Story first published: Wednesday, June 26, 2002, 5:30 [IST]