ಕಲಾವಿದರ ಮಾಸಾಶನ ದುಪ್ಪಟ್ಟು -ಎಸ್. ಎಂ. ಕೃಷ್ಣ ಪ್ರಕಟಣೆ
ಬೆಂಗಳೂರು : ಕಲಾವಿದರಿಗೆ ರಾಜ್ಯ ಸರಕಾರವು ನೀಡುತ್ತಿರುವ ಮಾಸಾಶನವನ್ನು ದುಪ್ಪಟ್ಟುಗೊಳಿಸಿರುವುದಾಗಿ ಮುಖ್ಯಮಂತ್ರಿ ಎಸ್. ಎಂ. ಕೃಷ್ಣ ಪ್ರಕಟಿಸಿದ್ದಾರೆ.
ಈ ಹಿಂದೆ ಮಾಸಾಶನ ರೂಪದಲ್ಲಿ ನೀಡಲಾಗುತ್ತಿದ್ದ 250 ರೂಪಾಯಿಯನ್ನು 500 ರೂಪಾಯಿಗಳಿಗೆ ಏರಿಸಲಾಗಿದೆ ಎಂದು ಕೃಷ್ಣ ಹೇಳಿದ್ದಾರೆ. ಅವರು ಮಂಗಳವಾರ ಕರ್ನಾಟಕ ಜಾನಪದ ಮತ್ತು ನಾಟಕ ಅಕಾಡೆಮಿ ಏರ್ಪಡಿಸಿದ್ದ 2001ನೇ ಸಾಲಿನ ಜ್ಞಾನ ವಿಜ್ಞಾನ ಪ್ರಶಸ್ತಿ ಪ್ರದಾನ ಮಾಡಿ ಮಾತನಾಡುತ್ತಿದ್ದರು.
ಕಲಾವಿದರಿಗೆ ನೀಡುವ ಮಾಸಾಶನವನ್ನು ಜೀವ ವಿಮೆಯಾಂದಿಗೆ ಹೆಣೆಯುವ ಯೋಜನೆಯಾಂದನ್ನು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಿದ್ಧಪಡಿಸುತ್ತಿದೆ ಎಂದ ಕೃಷ್ಣ ಕಲಾವಿದರ ವೈದ್ಯಕೀಯ ವೆಚ್ಚಗಳಿಗಾಗಿ ಸರಕಾರದ ವತಿಯಿಂದ ಮೀಸಲಿಟ್ಟ ಹಣವನ್ನು ಎರಡು ಲಕ್ಷದಿಂ 20 ಲಕ್ಷ ರೂಪಾಯಿ ಹೆಚ್ಚಿಸುವುದಾಗಿ ಭರವಸೆ ನೀಡಿದರು.
ಆರ್ಥಿಕವಾಗಿ ಹಿಂದುಳಿದ ವರ್ಗದ ಮಕ್ಕಳಿಗೆ ಉಚಿತ ಜನಪದ ಕಲಾಶಿಕ್ಷಣ ನೀಡುವ ಯೋಜನೆಯನ್ನು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಿದ್ಧಪಡಿಸಲಿದೆ ಎಂದು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಇಲಾಖೆಯ ಸಚಿವೆ ರಾಣಿ ಸತೀಶ್ ಹೇಳಿದರು.
(ಇನ್ಫೋ ವಾರ್ತೆ)
ಮುಖಪುಟ / ಇವತ್ತು... ಈ ಹೊತ್ತು...