ತ್ವರಿತ ಅಲರ್ಟ್ ಗಳಿಗಾಗಿ
For Daily Alerts
ತಮಿಳುನಾಡಿಗೆ ನೀರು : ನಿರ್ಧರಿಸಲು ಶನಿವಾರ ರಾಜ್ಯ ಸಂಪುಟ ಸಭೆ
ಬೆಂಗಳೂರು : ತಮಿಳುನಾಡಿಗೆ ಕಾವೇರಿ ನೀರು ಬಿಡುವಂತೆ ಪ್ರಧಾನಿ ಎ.ಬಿ.ವಾಜಪೇಯಿ ಅವರು ಮಾಡಿರುವ ಮನವಿ ಕುರಿತು ಶನಿವಾರ ಸಚಿವ ಸಂಪುಟ ಒಮ್ಮತದ ನಿರ್ಣಯ ಕೈಗೊಳ್ಳುವ ನಿರೀಕ್ಷೆಯಿದೆ.
ಶುಕ್ರವಾರ ಸುದ್ದಿಗಾರರೊಡನೆ ಮಾತಾಡುತ್ತಿದ್ದ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವ ಡಿ.ಬಿ.ಚಂದ್ರೇಗೌಡ ಈ ವಿಷಯ ತಿಳಿಸಿದರು.
ಕಾವೇರಿ ಜಲಾನಯನ ಪ್ರದೇಶದ ಕೆಆರೆಸ್, ಹಾರಂಗಿ, ಹೇಮಾವತಿ ಮತ್ತು ಕಬಿನಿ ಜಲಾಶಯಗಳಲ್ಲಿ ನೀರು ತೀರಾ ಕಡಿಮೆ ಇದೆ. ಈ ಪ್ರದೇಶಗಳಲ್ಲಿ ಕಳೆದ ಎರಡು ದಿನಗಳಿಂದಷ್ಟೇ ಮಳೆಯಾಗುತ್ತಿದೆ. ಸದ್ಯಕ್ಕೆ ತಮಿಳುನಾಡಿಗೆ ನೀರು ಬಿಡುವ ಪರಿಸ್ಥಿತಿಯಲ್ಲಿ ರಾಜ್ಯ ಖಂಡಿತ ಇಲ್ಲ. ಕಾವೇರಿ ನದಿ ಪರಿಶೀಲನಾ ಸಮಿತಿ ಬೇಕಾದರೆ ಅಣೆಕಟ್ಟುಗಳ ನೀರಿನ ಮಟ್ಟವನ್ನು ಬಂದು ನೋಡಲಿ ಎಂದು ಚಂದ್ರೇಗೌಡ ಹೇಳಿದರು.
(ಪಿಟಿಐ)
ಮುಖಪುಟ / ಇವತ್ತು... ಈ ಹೊತ್ತು...
Story first published: Friday, July 5, 2002, 5:30 [IST]