ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಪಣಂಬೂರು ಬೀಚ್‌ನಲ್ಲಿ ಮೂವರು ವಿದ್ಯಾರ್ಥಿಗಳು ನೀರುಪಾಲು

By Staff
|
Google Oneindia Kannada News

ಮಂಗಳೂರು: ಇಲ್ಲಿನ ಪಣಂಬೂರು ಬೀಚ್‌ನಲ್ಲಿ ಸ್ನಾನಕ್ಕೆಂದು ಸಮುದ್ರಕ್ಕಿಳಿದ ಮೂವರು ವಿದ್ಯಾರ್ಥಿಗಳು ಭಾನುವಾರ ಸಂಜೆ ನೀರು ಪಾಲಾಗಿದ್ದಾರೆ.

11 ಮಂದಿ ಪ್ರಥಮ ಪದವಿ ಓದುತ್ತಿರುವ ವಿದ್ಯಾರ್ಥಿಗಳು ಸ್ನಾನಕ್ಕೆಂದು ಸಮುದ್ರಕ್ಕಿಳಿದಾಗ, ಮೂವರು ವಿದ್ಯಾರ್ಥಿಗಳನ್ನು ತೆರೆ ಕೊಚ್ಚಿಕೊಂಡು ಹೋಗಿದೆ. ಮೃತ ವಿದ್ಯಾರ್ಥಿಗಳನ್ನು ಮೈಸುರು ಚಾಮರಾಜ ನಗರದ ಸುಬ್ರಹ್ಮಣ್ಯ, ಚಿಕ್ಕಮಗಳೂರು ಜಿಲ್ಲೆಯ ಕೊಪ್ಪದ ಅಜಿತ್‌ ಮತ್ತು ಕೊಡಗಿನ ಲವಿನ್‌ ಎಂದು ಗುರುತಿಸಲಾಗಿದೆ. ನಗರದ ಸಂತ ಅಲೋಶಿಯಸ್‌ ಕಾಲೇಜಿನಲ್ಲಿ ಓದುತ್ತಿದ್ದ ವಿದ್ಯಾರ್ಥಿಗಳು ವಿದ್ಯಾರ್ಥಿ ವಸತಿ ನಿಲಯದಲ್ಲಿ ವಾಸಿಸುತ್ತಿದ್ದರು.

(ಇನ್ಫೋ ವಾರ್ತೆ)

ಮುಖಪುಟ / ಇವತ್ತು... ಈ ಹೊತ್ತು...

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X