ಸುಬ್ರಹ್ಮಣ್ಯದಲ್ಲಿ ಕುಂಭದ್ರೋಣ: ಕುಮಾರಧಾರ ಜಲ ಸಮಾಧಿ
ಸುಬ್ರಹ್ಮಣ್ಯ : ಎರಡು ಮೂರು ದಿನಗಳಿಂದ ಸುರಿದ ಧಾರಾಕಾರ ಮಳೆಯಿಂದಾಗಿ ನೆರೆ ನೀರು ಏರುತ್ತಿದ್ದು ಕುಮಾರಧಾರಾ ಸೇತುವೆ ಮುಳುಗಡೆಯಾಗಿದೆ. ಸುಬ್ರಹ್ಮಣ್ಯಕ್ಕೆ ಸಂಪರ್ಕ ಕಲ್ಪಿಸುವ ಈ ಸೇತುವೆಯ ಜಲ ಸಮಾಧಿಯಿಂದಾಗಿ ವಾಹನ ಸಂಚಾರಕ್ಕೆ ಅಡ್ಡಿಯಾಗಿದ್ದು ನೆರ ನೀರು ಇನ್ನೂ ಹೆಚ್ಚುವ ಭೀತಿಯಿದೆ.
ಗುರುವಾರ ರಾತ್ರಿ ಆರಂಭಗೊಂಡ ಮಳೆ ಒಂದೇ ಸಮನೆ ಸುರಿಯುತ್ತಿದ್ದು ಹಳ್ಳ ಕೊಳ್ಳಗಳೆಲ್ಲ ತುಂಬಿ ಹರಿಯುತ್ತಿವೆ. ಘಟ್ಟದ ಮೇಲಿನ ನೀರು ಕೂಡ ಕುಮಾರಧಾರಾ ನದಿಗೆ ಸೇರುತ್ತಿದ್ದು , ಶುಕ್ರವಾರದ ಮಧ್ಯಾಹ್ನದ ವೇಳೆಗೇ ಸೇತುವೆ ನೀರಿನಲ್ಲಿ ಮುಳುಗಿಹೋಯಿತು. ಮುಂಜಾಗ್ರತಾ ಕ್ರಮವಾಗಿ ಸೇತುವೆಯ ಎರಡೂ ಕಡೆಗಳಲ್ಲಿ ಗೇಟ್ ಹಾಕಿ ಪೊಲೀಸರು ವಾಹನ ಹಾಗೂ ಜನ ಸಂಚಾರವನ್ನು ತಡೆದಿದ್ದಾರೆ.
ಸೇತುವೆ ಮುಳುಗಡೆಯಿಂದ ಮಂಗಳೂರು, ಉಪ್ಪಿನಂಗಡಿ, ಧರ್ಮಸ್ಥಳ ಹಾಗೂ ಬೆಂಗಳೂರು ಕಡೆಯ ವಾಹನಗಳು ಸುಬ್ರಹ್ಮಣ್ಯಕ್ಕೆ ಬರಲಾಗುತ್ತಿಲ್ಲ . ಪಂಜ ಮಾರ್ಗದಲ್ಲೂ ಸೇತುವೆ ಮೇಲೆ ನೀರು ಏರುತ್ತಲೇ ಇದೆ.
ಸುಬ್ರಹ್ಮಣ್ಯದಲ್ಲಿ ನೂರಾರು ಯಾತ್ರಿಕರು ಮಳೆಯಿಂದಾಗಿ ತೊಂದರೆಗೆ ಸಿಲುಕಿದ್ದು , ಶಾಲಾ ಕಾಲೇಜು ವಿದ್ಯಾರ್ಥಿಗಳೂ ತೊಂದರೆ ಅನುಭವಿಸುತ್ತಿದ್ದಾರೆ. ಈ ನಡುವೆ ಮಳೆ ಪ್ರಾರಂಭವಾದಾಗಿನಿಂದ ವಿದ್ಯುತ್ ನಾಪತ್ತೆಯಾಗಿದೆ.
ಮಳೆ ಮಳೆ ಮಳೆ
ಕರಾವಳಿಯ ಬೆಳ್ತಂಗಡಿ, ಧರ್ಮಸ್ಥಳ, ಉಜಿರೆ ಮುಂತಾದೆಡೆಯೂ ಭಾರೀ ಮಳೆ ಸುರಿಯುತ್ತಿದೆ. ಮಳೆಯಿಂದಾಗಿ ಕೆಲವೆಡೆ ರಸ್ತೆ ಸಂಚಾರ ಅಸ್ತವ್ಯಸ್ತವಾಗಿದೆ.
(ಇನ್ಫೋ ವಾರ್ತೆ)
ಮುಖಪುಟ / ಇವತ್ತು... ಈ ಹೊತ್ತು...
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications