ಮಂತ್ರಾಲಯ ಮಠದಿಂದ ‘ಆಧ್ಯಾತ್ಮಿಕ ಜಾಗೃತಿ’ ರಾಷ್ಟ್ರೀಯ ಸಮ್ಮೇಳನ
ಬೆಂಗಳೂರು : ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿ ಮಠ ಜುಲೈ 17 ರಿಂದ ಮೂರು ದಿನಗಳ ಕಾಲ ‘ಆಧ್ಯಾತ್ಮಿಕ ಜಾಗೃತಿ’ ರಾಷ್ಟ್ರೀಯ ಸಮ್ಮೇಳನವನ್ನು ಪುಣೆಯಲ್ಲಿ ಏರ್ಪಡಿಸಿದೆ.
ಮುನ್ನೂರಕ್ಕೂ ಹೆಚ್ಚು ವಿದ್ವಾಂಸರು ಭಾಗವಹಿಸುವ ಈ ಸಮ್ಮೇಳನದಲ್ಲಿ ಆಧ್ಯಾತ್ಮಿಕ ವಿಷಯ ಮಾತ್ರವಲ್ಲದೆ ಸಾಂಸ್ಕೃತಿಕ, , ಶೈಕ್ಷಣಿಕ, ಸಾಮಾಜಿಕ ಹಾಗೂ ಸಾಹಿತ್ಯಿಕ ವಿಷಯಗಳ ಬಗೆಗೂ ಬೆಳಕು ಚೆಲ್ಲಲಾಗುವುದು ಎಂದು ಪ್ರಸಿದ್ಧ ಸಾಹಿತಿ ಅರಳುಮಲ್ಲಿಗೆ ಪಾರ್ಥಸಾರಥಿ ಸುದ್ದಿಗಾರರಿಗೆ ಸಮ್ಮೇಳನದ ವಿವರಗಳನ್ನು ತಿಳಿಸಿದರು.
ಅಪರೂಪದ ಹಸ್ತಪ್ರತಿಗಳು, ಹಳೆಯ ಪುಸ್ತಕಗಳು ಹಾಗೂ ರಾಘವೇಂದ್ರ ಸ್ವಾಮಿ ಬದುಕು- ಸಾಧನೆಯನ್ನು ಬಿಂಬಿಸುವ ಚಿತ್ರಗಳ ಪ್ರದರ್ಶನ ಸಮಾವೇಶದ ಅಂಗವಾಗಿ ನಡೆಯಲಿದೆ. ಪ್ರಸಿದ್ಧ ಹಿಂದೂಸ್ತಾನಿ ಗಾಯಕ ಪಂಡಿತ್ ಭೀಮಸೇನ ಜೋಷಿ, ಸುಪ್ರಿಂ ಕೋರ್ಟ್ನ ಮಾಜಿ ಮುಖ್ಯ ನ್ಯಾಯಮೂರ್ತಿ ಹಾಗೂ ಸಂವಿಧಾನ ಪರಾಮರ್ಶೆ ಆಯೋಗದ ಅಧ್ಯಕ್ಷ ಎಂ.ಎನ್.ವೆಂಕಟಾಚಲಯ್ಯ, ಚುನಾವಣಾ ಆಯೋಗದ ಮಾಜಿ ಮುಖ್ಯ ಆಯುಕ್ತ ಟಿ.ಎನ್.ಶೇಷನ್ ಅವರು ಸಮಾವೇಶದಲ್ಲಿ ಭಾಗವಹಿಸುವರು.
ಪ್ರಸಿದ್ಧ ಗಾಯಕ ಜೇಸುದಾಸ್ ಮತ್ತಿತರ ಸಂಗೀತ ವಿದ್ವಾಂಸರಿಂದ ಸಂಗೀತ ಕಾರ್ಯಕ್ರಮ, ರಕ್ತದಾನ ಶಿಬಿರ, ಉಚಿತ ಆರೋಗ್ಯ ಶಿಬಿರ ಹಾಗೂ ನೇತ್ರ ಶಿಬಿರಗಳು ಸಮಾವೇಶದ ಪ್ರಯುಕ್ತ ನಡೆಯಲಿವೆ. ಇದೇ ಸಂದರ್ಭದಲ್ಲಿ ಆಂಧ್ರಪ್ರದೇಶ ಹಾಗೂ ತಮಿಳುನಾಡಿನ 50 ವಿದ್ವಾಂಸರಿಂದ ‘ವಿಷ್ಣು ಮಹಾಯಾಗ’ ನಡೆಯಲಿದೆ.
ಪಾರ್ಥಸಾರಥಿ ಅವರ ‘ಪುರಂದರದಾಸರು’ ಕೃತಿಯ ಇಂಗ್ಲೀಷ್ ಆವೃತ್ತಿ ಸಮಾವೇಶದಲ್ಲಿ ಬಿಡುಗಡೆಯಾಗುವುದು. ಕರ್ನಾಟಕದಿಂದ 12 ಸ್ವಾಮೀಜಿಗಳು ಸಮಾವೇಶದಲ್ಲಿ ಭಾಗವಹಿಸುವರು ಎಂದು ಅರಳುಮಲ್ಲಿಗೆ ಪಾರ್ಥಸಾರಥಿ ತಿಳಿಸಿದರು.(ಪಿಟಿಐ)
ಮುಖಪುಟ / ಇವತ್ತು... ಈ ಹೊತ್ತು...
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications