ತ್ವರಿತ ಅಲರ್ಟ್ ಗಳಿಗಾಗಿ
For Daily Alerts
ನೂತನ ರಾಷ್ಟ್ರಪತಿ ಕಲಾಂಗೆ ಮುಖ್ಯಮಂತ್ರಿ ಕೃಷ್ಣ ಅಭಿನಂದನೆ
ಬೆಂಗಳೂರು : ಭಾರತ ಗಣರಾಜ್ಯದ 12 ನೇ ರಾಷ್ಟ್ರಪತಿಗಳಾಗಿ ಅಧಿಕಾರ ಸ್ವೀಕರಿಸಿದ ಡಾ.ಎ.ಪಿ.ಜೆ.ಅಬ್ದುಲ್ ಕಲಾಂ ಅವರನ್ನು ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅಭಿನಂದಿಸಿದ್ದಾರೆ.
ನಾಡಿನ ಪರವಾಗಿ ಹಾಗೂ ವೈಯಕ್ತಿಕವಾಗಿ ಕಲಾಂ ಅವರಿಗೆ ಅಭಿನಂದನೆಗಳು. ಕರ್ನಾಟಕದೊಂದಿಗೆ ಅವಿನಾಭಾವ ಸಂಬಂಧ ಹೊಂದಿರುವ ಕಲಾಂ ಅವರು ರಾಷ್ಟ್ರಪತಿಗಳಾಗಿರುವುದು ಎಲ್ಲ ಕನ್ನಡಿಗರಿಗೂ ಸಂತಸ ತಂದಿದೆ ಎಂದು ತಮ್ಮ ಅಭಿನಂದನಾ ಸಂದೇಶದಲ್ಲಿ ಕೃಷ್ಣ ತಿಳಿಸಿದ್ದಾರೆ.
ಅಂತರರಾಷ್ಟ್ರೀಯ ಖ್ಯಾತಿ ಪಡೆದ ವಿಜ್ಞಾನಿಯಾಬ್ಬರು ಭಾರತೀಯ ಗಣತಂತ್ರದ ಅಧ್ಯಕ್ಷರಾಗಿ ನಿಯುಕ್ತರಾಗಿರುವುದು ಅಂತರರಾಷ್ಟ್ರೀಯ ಮಟ್ಟದಲ್ಲಿ ಭಾರತದ ಘನತೆಯನ್ನು ಹೆಚ್ಚು ಎತ್ತರಕ್ಕೆ ಕೊಂಡೊಯ್ಯುವ ವಿಚಾರ ಎಂದೂ ಕೃಷ್ಣ ಸಂತಸ ವ್ಯಕ್ತಪಡಿಸಿದ್ದಾರೆ.
(ಇನ್ಫೋ ವಾರ್ತೆ)
ವಾರ್ತಾ
ಸಂಚಯ
ಮುಖಪುಟ
/
ಕೃಷ್ಣ
ಗಾರುಡಿ
Comments
Story first published: Thursday, July 25, 2002, 5:30 [IST]