ತ್ವರಿತ ಅಲರ್ಟ್ ಗಳಿಗಾಗಿ
For Daily Alerts
ಐಟಿ-ಟೂರಿಜಂ ಕ್ಷೇತ್ರಗಳಲ್ಲಿ ಕರ್ನಾಟಕೊಂದಿಗೆ ಕೇರಳ ಸಹಕಾರ
ತಿರುವನಂತಪುರಂ : ಮಾಹಿತಿ ತಂತ್ರಜ್ಞಾನ ಹಾಗೂ ಪ್ರವಾಸೋದ್ಯಮ ಕ್ಷೇತ್ರಗಳಲ್ಲಿ ಸಾಧ್ಯವಿರುವೆಡೆಗಳಲ್ಲಿ ಕರ್ನಾಟಕ ಹಾಗೂ ಕೇರಳ ರಾಜ್ಯ ಸರ್ಕಾರಗಳು ಸಹಕಾರ ಒಪ್ಪಂದವೊಂದಕ್ಕೆ ಬರುವ ಸಾಧ್ಯತೆಗಳಿವೆ.
ಉಭಯ ರಾಜ್ಯಗಳ ಮಾಹಿತಿ ತಂತ್ರಜ್ಞಾನ ಹಾಗೂ ಪ್ರವಾಸೋದ್ಯಮ ಕ್ಷೇತ್ರಗಳಲ್ಲಿ ಪರಸ್ಪರ ಕೊಡುಕೊಳ್ಳುವ ಧೋರಣೆಯಿಂದ ಲಾಭವನ್ನು ದುಪ್ಪಟ್ಟುಗೊಳಿಸುವ ಕರ್ನಾಟಕ ಸರ್ಕಾರದೊಂದಿಗೆ ಸಹಕಾರ ಸಾಧಿಸಲು ಪ್ರಯತ್ನಿಸಲಾಗುತ್ತಿದೆ. ಈ ಬಗ್ಗೆ ಕರ್ನಾಟಕದ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರೊಂದಿಗೆ ಈಗಾಗಲೇ ಚರ್ಚಿಸಲಾಗಿದೆ ಎಂದು ಕೇರಳ ಕೈಗಾರಿಕೆಗಳ ಸಚಿವ ಪಿ.ಕೆ.ಕುನ್ಹಿಲ್ಕುಟ್ಟಿ ಶುಕ್ರವಾರ ವಿಧಾನಸಭೆಯಲ್ಲಿ ತಿಳಿಸಿದರು.
ಟೆಕ್ನೋಪಾರ್ಕ್ನ ಸಮಾರಂಭವೊಂದರಲ್ಲಿ ಭಾಗವಹಿಸಲು ಕರ್ನಾಟಕದ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಆಗಸ್ಟ್ನಲ್ಲಿ ತಿರುವನಂತಪುರಕ್ಕೆ ಆಗಮಿಸುವ ನಿರೀಕ್ಷೆಯಿದೆ. ಈ ಸಂದರ್ಭದಲ್ಲಿ ಅವರೊಂದಿಗೆ ಹೆಚ್ಚಿನ ಮಾತುಕತೆ ನಡೆಸುವ ಆಶಯವನ್ನು ಕುಟ್ಟಿ ವ್ಯಕ್ತಪಡಿಸಿದರು.
(ಪಿಟಿಐ)
ಮುಖಪುಟ / ಇವತ್ತು... ಈ ಹೊತ್ತು...
Comments
Story first published: Friday, July 26, 2002, 5:30 [IST]