ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕಾಫಿ ಬೆಳೆಗೆ ಬೆಂಬಲ ಬೆಲೆ ನೀಡಲು ಕೇಂದ್ರ ನಿರಾಕರಣೆ

By Staff
|
Google Oneindia Kannada News

ನವದೆಹಲಿ: ಸಾಲದ ಮೇಲಿನ ಬಡ್ಡಿ ಮನ್ನಾ ಹಾಗೂ ಬೆಂಬಲ ಬೆಲೆ ಘೋಷಣೆ ಮುಂತಾದ ಕಾಫಿ ಬೆಳೆಗಾರರ ಬೇಡಿಕೆಗಳನ್ನು ಕೇಂದ್ರ ಸರಕಾರ ಸಾರಾಸಗಟಾಗಿ ತಿರಸ್ಕರಿಸಿದೆ.

ಮಾಜಿ ಪ್ರಧಾನಿ ಎಚ್‌. ಡಿ. ದೇವೇಗೌಡ ಅವರು ಲೋಕಸಭೆಯಲ್ಲಿ ಮಂಡಿಸಿದ ಗೊತ್ತುವಳಿಯ ಮೇಲೆ ನಡೆದ ಚರ್ಚೆಯ ನಂತರ ಕೇಂದ್ರ ವಾಣಿಜ್ಯ ಖಾತೆಯ ರಾಜ್ಯ ಸಚಿವ ರಾಜೀವ್‌ ಪ್ರತಾಪ್‌ ರೂಡಿ ಅವರು ಕಾಫಿಗೆ ಬೆಂಬಲ ಬೆಲೆ ಘೋಷಿಸುವುದು ಸಾಧ್ಯವಿಲ್ಲ ಎಂದರು.

ಸಾರ್ವಕಾಲಿಕ ವಾಣಿಜ್ಯ ಬೆಳೆಯಾದ ಕಾಫಿಗೆ, ಭತ್ತ- ಗೋಧಿಗಳ ರೀತಿಯಲ್ಲಿ ಬೆಂಬಲ ಬೆಲೆ ನೀಡಲು ಸಾಧ್ಯವಿಲ್ಲ ಎಂದ ಸಚಿವರು, ರಾಷ್ಟ್ರೀಕೃತ ಮತ್ತು ಸಹಕಾರಿ ಬ್ಯಾಂಕುಗಳಿಂದ ಪಡೆದ ಸಾಲದ ಮೇಲಿನ ಬಡ್ಡಿ ಮನ್ನಾ ಬೇಡಿಕೆಯನ್ನೂ ತಳ್ಳಿ ಹಾಕಿದರು. ಬದಲಾಗಿ ಈಗಾಗಲೇ ಸರಕಾರ ಪ್ರಕಟಿಸಿರುವ ಹಳೆಯ ಪರಿಹಾರ ಕ್ರಮಗಳನ್ನು ಪ್ರತಾಪ್‌ ಪುನರುಚ್ಚರಿಸಿ, ಕಾಫಿ ಮಂಡಳಿ ನೀಡಿದ ಸಾಲದ ಮೇಲಿನ ರೂ. 9.84 ಕೋಟಿ ರೂಪಾಯಿ ಸುಸ್ತಿ ಬಡ್ಡಿ ಮನ್ನಾ ಮಾಡಲಾಗಿದೆ ಎಂದರು.

(ಇನ್ಫೋ ವಾರ್ತೆ)

ವಾರ್ತಾ ಸಂಚಯ
ಮುಖಪುಟ / ಇವತ್ತು... ಈ ಹೊತ್ತು...

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X