ತ್ವರಿತ ಅಲರ್ಟ್ ಗಳಿಗಾಗಿ
For Daily Alerts
ಬರ: ಅಗತ್ಯ ಇರುವ ಪ್ರದೇಶಗಳಲ್ಲಿ ಸರಕಾರದಿಂದ ಗೋಶಾಲೆ
ಬೆಂಗಳೂರು : ರಾಜ್ಯಾದ್ಯಂತ ಸಾಕಷ್ಟು ಮಳೆಯಾಗದೆ ಬರ ಪರಿಸ್ಥಿತಿ ಮುಂದುವರೆಯುತ್ತಿರುವುದನ್ನು ಗಮನಿಸಿದ ಸರಕಾರ ಅಗತ್ಯ ಇರುವ ಪ್ರದೇಶಗಳಲ್ಲಿ ಗೋಶಾಲೆಗಳನ್ನು ತೆರೆಯಲು ನಿರ್ಧರಿಸಿದೆ.
ಜಿಲ್ಲಾಧಿಕಾರಿಗಳ ವರದಿಯನ್ನು ಆಧರಿಸಿ ಸರಕಾರ ಗೋಶಾಲೆಗಳನ್ನು ತೆರೆಯಲಿದೆ ಎಂದು ಕಂದಾಯ ರಾಜ್ಯ ಸಚಿವ ಎಂ. ಮಲ್ಲಿಕಾರ್ಜುನಪ್ಪ ನಾಗಪ್ಪ ಸೋಮವಾರ ವಿಧಾನ ಸಭೆಯಲ್ಲಿ ತಿಳಿಸಿದರು. ರಾಜ್ಯದಲ್ಲಿ ಈಗ 92 ಲಕ್ಷ ಟನ್ ಮೇವು ದಾಸ್ತಾನಿದೆ. ಅರಣ್ಯ ಮತ್ತು ಪಶು ಇಲಾಖೆಯ ನೆರವಿನೊಂದಿಗೆ ಅಗತ್ಯ ಮೇವು ಪೂರೈಸಲು ಸದ್ಯದಲ್ಲೇ ಯೋಜನೆಯನ್ನು ರೂಪಿಸಲಾಗುವುದು ಎಂದು ಮಲ್ಲಿಕಾರ್ಜುನಯ್ಯ ಹೇಳಿದರು.
ಅಗತ್ಯ ಇರುವ ಜಿಲ್ಲೆಗಳಿಗೆ ಮೇವು ಸಾಗಾಣೆಗೆ ಸೂಕ್ತ ವ್ಯವಸ್ಥೆ ಕಲ್ಪಿಸಲು ಸರಕಾರ ಜಿಲ್ಲಾಧಿಕಾರಿಗಳಿಗೆ ನಿರ್ದೇಶನ ಜಾರಿ ಮಾಡಲಿದೆ. ಇದರಿಂದ ಬರ ಪೀಡಿತ ಪ್ರದೇಶಗಳಲ್ಲಿ ಜಾನುವಾರುಗಳನ್ನು ಕಸಾಯಿಖಾನೆಗೆ ಅಟ್ಟುವುದು ತಪ್ಪುತ್ತದೆ ಎಂದು ಮಲ್ಲಿಕಾರ್ಜುನಯ್ಯ ತಿಳಿಸಿದರು.
(ಇನ್ಫೋ ವಾರ್ತೆ)
ವಾರ್ತಾ
ಸಂಚಯ
ಮುಖಪುಟ
/
ಇವತ್ತು...
ಈ
ಹೊತ್ತು...
Story first published: Tuesday, August 6, 2002, 0:00 [IST]