ಮುಷ್ಕರ ರಜಾ ಕಳೆದು ಶಾಲಾ- ಕಾಲೇಜುಗಳಿಗೆ ಹೊರಟ ಮಕ್ಕಳು
ಬೆಂಗಳೂರು : ಖಾಸಗಿ ಅನುದಾನಿತ ಶಿಕ್ಷಣ ಸಂಸ್ಥೆಗಳ ಬೇಡಿಕೆಗೆ ಸ್ಪಂದಿಸುವ ಭರವಸೆಯನ್ನು ಸರ್ಕಾರ ಕೊಟ್ಟ ಹಿನ್ನೆಲೆಯಲ್ಲಿ ಶನಿವಾರದಿಂದ ಶಾಲಾ- ಕಾಲೇಜುಗಳು ಮತ್ತೆ ಪ್ರಾರಂಭವಾಗಿವೆ.
ಆಗಸ್ಟ್ 19ರಿಂದ ಖಾಸಗಿ ಅನುದಾನಿತ ಶಾಲಾ- ಕಾಲೇಜುಗಳು ಬೇಡಿಕೆಗಳನ್ನು ಮುಂದಿಟ್ಟು, ಅನಿರ್ದಿಷ್ಟ ಅವಧಿ ಮುಷ್ಕರ ಹೂಡಿದ್ದವು. ಖಾಸಗಿ ಅನುದಾನಿತ ಶಿಕ್ಷಣ ಸಂಸ್ಥೆಗಳ ಪ್ರತಿನಿಧಿಗಳು, ಉನ್ನತ ಶಿಕ್ಷಣ ಸಚಿವ ಡಾ.ಜಿ.ಪರಮೇಶ್ವರ್ ಹಾಗೂ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಪ್ರೊ.ಬಿ.ಕೆ.ಚಂದ್ರಶೇಖರ್ ನಡುವೆ ಶುಕ್ರವಾರ ನಡೆದ ಮಾತುಕತೆ ಫಲ ಕೊಟ್ಟಿತು.
ಸುಪ್ರಿಂಕೋರ್ಟಿನ ತೀರ್ಪಿಗೆ ಅನುಗುಣವಾಗಿ 1994ನೇ ಇಸವಿಗಿಂತ ಮುಂಚೆ ಪ್ರಾರಂಭವಾಗಿರುವ ಶಾಶ್ವತ ಅನುದಾನ ರಹಿತ ಖಾಸಗಿ ಶಾಲಾ ಕಾಲೇಜುಗಳಿಗೆ ಅವುಗಳ ಅರ್ಹತೆಗೆ ತಕ್ಕಂತೆ ಅನುದಾನ ಕೊಡಬೇಕು ಎಂಬುದೂ ಸೇರಿದಂತೆ ಹಲವು ಬೇಡಿಕೆಗಳನ್ನು ಸರ್ಕಾರದ ಮುಂದೆ ಇಡಲಾಗಿತ್ತು. ಪ್ರಮುಖ ಬೇಡಿಕೆಗಳ ಪೈಕಿ ಪ್ರತಿಶತ 70ರಷ್ಟನ್ನು ಈಡೇರಿಸುವುದಾಗಿ ಸರ್ಕಾರ ಭರವಸೆ ಕೊಟ್ಟಿದೆ.
(ಇನ್ಫೋ
ವಾರ್ತೆ)
ವಾರ್ತಾ
ಸಂಚಯ
ಮುಖಪುಟ
/
ಇವತ್ತು...
ಈ
ಹೊತ್ತು...