ನಾಗಪ್ಪ ಅಪಹರಣ : ಬೆಂಗಳೂರಲ್ಲಿ ವಾರ ಕಾಲ ನಿಷೇಧಾಜ್ಞೆ ಜಾರಿ
ಬೆಂಗಳೂರು : ಮಾಜಿ ಸಚಿವ ಎಚ್.ನಾಗಪ್ಪನವರನ್ನು ನರಹಂತಕ ವೀರಪ್ಪನ್ ಅಪಹರಿಸಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಬೆಂಗಳೂರಿನಲ್ಲಿ ಒಂದು ವಾರ ಕಾಲದ ನಿಷೇಧಾಜ್ಞೆ ವಿಧಿಸಿ ನಗರ ಪೊಲೀಸ್ ಕಮೀಷನರ್ ಎಚ್.ಟಿ.ಸಾಂಗ್ಲಿಯಾನ ಆದೇಶ ಹೊರಡಿಸಿದ್ದಾರೆ.
ತಮಿಳರು ಹೆಚ್ಚಿನ ಸಂಖ್ಯೆಯಲ್ಲಿ ವಾಸವಾಗಿರುವ ಪ್ರದೇಶಗಳಲ್ಲಿ ಭದ್ರತೆಯನ್ನು ಹೆಚ್ಚಿಸಲಾಗಿದೆ. ಸೋಮವಾರ (ಆ.26) ಮಧ್ಯಾಹ್ನ 2 ಗಂಟೆಯಿಂದಲೇ ಜಾರಿಯಾಗುವಂತೆ, ಸೆಕ್ಷನ್ 144 ರ ಅನ್ವಯ 1 ವಾರ ಕಾಲದ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ ಎಂದು ಸುದ್ದಿಗಾರರೊಂದಿಗೆ ಮಾತನಾಡಿದ ಸಾಂಗ್ಲಿಯಾನ ತಿಳಿಸಿದರು.
ಈ ನಡುವೆ ವೀರಪ್ಪನ್ ಶಿಕಾರಿ ಪುನಃ ಚುರುಕುಗೊಳ್ಳುವ ಸಾಧ್ಯತೆಗಳು ನಿಚ್ಚಳವಾಗಿದ್ದು - ಹಿರಿಯ ಪೊಲೀಸ್ ಅಧಿಕಾರಿಗಳಾದ ಪೊಲೀಸ್ ಮಹಾ ನಿರ್ದೇಶಕ ವಿ.ವಿ. ಭಾಸ್ಕರ್, ಡಿಜಿಪಿ ಸುಭಾಷ್ ಭರಣಿ ಮಲೆ ಮಹದೇಶ್ವರ ಬೆಟ್ಟದಲ್ಲಿ ಈಗಾಗಲೇ ಠಿಕಾಣಿ ಹೂಡಿದ್ದಾರೆ.
ಜಂಟಿ ಪೊಲೀಸ್ ಕಮೀಷನರ್(ಅಪರಾಧ) ಜ್ಯೋತಿ ಪ್ರಕಾಶ್ ಹಾಗೂ ಕುಮಾರಸ್ವಾಮಿ ಬಡಾವಣೆ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಪಿ.ಎಫ್. ಗಚಿನಕಟ್ಟಿ ಅವರನ್ನು ವೀರಪ್ಪನ್ ಶಿಕಾರಿಯಲ್ಲಿ ತೊಡಗಿರುವ ವಿಶೇಷ ಪೊಲೀಸ್ ಪಡೆಗೆ ನೆರವು ನೀಡಲು ನಿಯೋಜಿಸಲಾಗಿದೆ.
(ಪಿಟಿಐ)
ವಾರ್ತಾ
ಸಂಚಯ
ಮುಖಪುಟ
/
ವೀರಪ್ಪನ್
ಶಿಕಾರಿ