ತ್ವರಿತ ಅಲರ್ಟ್ ಗಳಿಗಾಗಿ
For Daily Alerts
ಇಂಜಿನಿಯರಿಂಗ್ ವಿದ್ಯಾರ್ಥಿಗಳಿಂದ ಸೆ.26 ರಿಂದ ರಾಜ್ಯಾದ್ಯಂತ ಮುಷ್ಕರ
ಮೈಸೂರು : ತಮ್ಮ ಏಳು ಬೇಡಿಕೆಗಳನ್ನು ಈಡೇರಿಸದಿದ್ದರೆ ಸೆಪ್ಟಂಬರ್ 26 ರಿಂದ ರಾಜ್ಯಾದ್ಯಂತ ಅನಿರ್ದಿಷ್ಟಾವಧಿ ಮುಷ್ಕರ ಕೈಗೊಳ್ಳುವುದಾಗಿ ಇಂಜಿನಿಯರಿಂಗ್ ವಿದ್ಯಾರ್ಥಿಗಳು ಬೆದರಿಕೆ ಒಡ್ಡಿದ್ದಾರೆ.
ವಿವಿಧ ವಿದ್ಯಾರ್ಥಿ ಸಂಘಟನೆಗಳ ಪ್ರತಿನಿಧಿಗಳು ಬುಧವಾರ (ಸೆ.18) ಸಭೆ ಸೇರಿ, ವಿದ್ಯಾರ್ಥಿಗಳ ಬೇಡಿಕೆಗಳು ಈಡೇರದಿದ್ದರೆ ಸೆ.26 ರಿಂದ ಮುಷ್ಕರಕ್ಕಿಳಿಯಲು ನಿರ್ಧರಿಸಿದರು. ಈ ಸಂಬಂಧ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವ ವಿದ್ಯಾಲಯದ ಮೈಸೂರಿನಲ್ಲಿನ ಸ್ಥಾನಿಕ ಕೇಂದ್ರಕ್ಕೆ ವಿದ್ಯಾರ್ಥಿ ಪ್ರತಿನಿಧಿಗಳು ಜ್ಞಾಪನ ಪತ್ರವನ್ನು ಸಲ್ಲಿಸಿದರು.
ವಿದ್ಯಾರ್ಥಿಗಳ
ಪ್ರಮುಖ
ಬೇಡಿಕೆಗಳು
:
- ಪ್ರಸ್ತುತ ಇರುವ ನಿರ್ದಿಷ್ಟ ಕ್ಯಾರಿ ಓವರ್ ಪದ್ಧತಿಯನ್ನು ಕೈ ಬಿಟ್ಟು ಸಂಪೂರ್ಣ ಕ್ಯಾರಿ ಓವರ್ ಪದ್ಧತಿ ಜಾರಿಗೊಳಿಸುವುದು.
- ಕಡ್ಡಾಯ ಹಾಜರಿ ಪ್ರಮಾಣವನ್ನು ಕಡಿತಗೊಳಿಸುವುದು.
- ಆಂತರಿಕ ಮೌಲ್ಯಮಾಪನ ಪದ್ಧತಿಯನ್ನು ಜಾರಿಗೆ ತರುವುದು.
ಮುಖಪುಟ / ಇವತ್ತು... ಈ ಹೊತ್ತು...
Comments
Story first published: Wednesday, September 18, 2002, 5:30 [IST]