ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಆತ್ಮಾರ್ಪಣೆ ಕುರಿತು ನ್ಯಾಯಾಂಗ ತನಿಖೆ,ಸೆ.24 ರಿಂದ ಅಧಿವೇಶನ

By Staff
|
Google Oneindia Kannada News

ಬೆಂಗಳೂರು : ಕಬಿನಿ ಜಲಾಶಯಕ್ಕೆ ಧುಮುಕಿದ ಬೀಚನಹಳ್ಳಿ ಗ್ರಾಮ ಪಂಚಾಯಿತಿ ಸದಸ್ಯ ಗುರುಸ್ವಾಮಿ ಅವರು ಆತ್ಮಾರ್ಪಣೆ ಮಾಡಿಕೊಂಡ ಪ್ರಕರಣವನ್ನು ನ್ಯಾಯಾಂಗ ತನಿಖೆಗೆ ಒಪ್ಪಿಸಲು ರಾಜ್ಯ ಸರ್ಕಾರ ತೀರ್ಮಾನಿಸಿದೆ.

ಕಬಿನಿ ಜಲಾಶಯದಲ್ಲಿ ವ್ಯಕ್ತಿಯಾಬ್ಬ ಮುಳುಗಿದ ಹಿನ್ನೆಲೆಯಲ್ಲಿ ಗುರುವಾರ (ಸೆ.19) ನಡೆದ ತುರ್ತು ಸಚಿವ ಸಂಪುಟ ಸಭೆ ಪ್ರಕರಣವನ್ನು ನ್ಯಾಯಾಂಗ ತನಿಖೆಗೆ ಒಪ್ಪಿಸಲು ಹಾಗೂ ಕಾವೇರಿ ಸಮಸ್ಯೆಯ ಲಗುಬಿಗು ಕುರಿತು ಚರ್ಚಿಸಲು ಸೆಪ್ಟಂಬರ್‌ 24 ರಿಂದ ತುರ್ತು ವಿಧಾನಮಂಡಲ ಅಧಿವೇಶನ ಕರೆಯಲು ತೀರ್ಮಾನ ಕೈಗೊಂಡಿತು.

ಸುಪ್ರಿಂಕೋರ್ಟ್‌ ಮುಂದೆ ನೀರಿನ ಹರಿವಿನ ಕುರಿತು ಪ್ರಮಾಣ ಪತ್ರ ಸಲ್ಲಿಸುವ ಮುನ್ನ ಸೆಪ್ಟಂಬರ್‌ 21 ರಂದು ದೆಹಲಿಯಲ್ಲಿ ಸರ್ವಪಕ್ಷ ಸಭೆಯನ್ನು ನಡೆಸಲು ಕೂಡ ಸಂಪುಟ ಸಭೆ ತೀರ್ಮಾನಿಸಿತು ಎಂದು ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ವಾರ್ತಾ ಸಚಿವ ಕಾಗೋಡು ತಿಮ್ಮಪ್ಪ ಹೇಳಿದರು.

ಮೃತ ಗುರುಸ್ವಾಮಿ ಅವರ ಕುಟುಂಬಕ್ಕೆ 1 ಲಕ್ಷ ರುಪಾಯಿ ಪರಿಹಾರ ಧನ ನೀಡಲಾಗುವುದು ಎಂದೂ ಸಚಿವ ಕಾಗೋಡು ತಿಮ್ಮಪ್ಪ ಹೇಳಿದರು.

(ಪಿಟಿಐ)

ಪೂರಕ ಓದಿಗೆ-
ಮುಖಪುಟ / ಇವತ್ತು... ಈ ಹೊತ್ತು...

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X