ಕನ್ನಡಿಗರನ್ನು ಶ್ಲಾಘಿಸಿದ ನೂತನ ಪೊಲೀಸ್ ವರಿಷ್ಠ ಮಡಿಯಾಳ್ !
ಬೆಂಗಳೂರು: ರಾಜ್ಯದ ನೂತನ ಪೊಲೀಸ್ ಮಹಾ ನಿರ್ದೇಶಕರಾಗಿ ಟಿ. ಮಡಿಯಾಳ್ ಸೋಮವಾರ ಅಧಿಕಾರ ವಹಿಸಿಕೊಂಡಿದ್ದಾರೆ.
ಪೊಲೀಸರು ಸಾರ್ವಜನಿಕರೊಂದಿಗೆ ಉತ್ತಮ ಸಂಬಂಧ ಇರಿಸಿಕೊಳ್ಳಬೇಕು. ಸೇವಾ ಸಂಸ್ಥೆಗಳ ಪ್ರೀತಿ ವಿಶ್ವಾಸ ಗಳಿಸಬೇಕು ಎಂಬುದು ಮಡಿಯಾಳ್ ಅವರ ಆಕಾಂಕ್ಷೆ. ಅಧಿಕಾರ ವಹಿಸಿಕೊಂಡ ನಂತರ ಪತ್ರಕರ್ತರೊಂದಿಗೆ ಮಾತನಾಡಿದ ಮಡಿಯಾಳ್ ರಾಜ್ಯದಲ್ಲಿ ಕಾನೂನು ಮತ್ತು ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವಲ್ಲಿ ಇಲಾಖೆಯ ಪಾತ್ರ ದೊಡ್ಡದು. ಈ ನಿಟ್ಟಿನಲ್ಲಿ ಪೊಲೀಸರು ಜವಾಬ್ದಾರಿಯಿಂದ ಕೆಲಸ ಮಾಡಬೇಕು ಎಂಬ ಕಿವಿ ಮಾತು ಹೇಳಿದರು.
ಮಡಿಯಾಳ್ ಪ್ರಕಾರ ಪೊಲೀಸರು ಸಾರ್ವಜನಿಕರಿಗೆ ಹತ್ತಿರವಾದರೆ ಬಹಳಷ್ಟು ಸಮಸ್ಯೆಗಳು ಬಗೆ ಹರಿಯುತ್ತವೆ. ರಾಜ್ಯದ ಜನರು ಶಾಂತ್ರಿ ಪ್ರಿಯರು. ಆದ್ದರಿಂದ ಕಾನೂನು ಸುವ್ಯವಸ್ಥೆ ಪಾಲನೆಗೆ ನೆರವಾಗುವ ವಿಶ್ವಾಸ ತಮಗಿದೆ ಎಂದು ಮಡಿಯಾಳ್ ಹೇಳಿದರು.
ತಿಮ್ಮಪ್ಪಯ್ಯ ಮಡಿಯಾಳ್ ಮೂಲತಃ ಬಂಟ್ವಾಳ ತಾಲ್ಲೂಕಿನ ಅಳಕೆ ಗ್ರಾಮದವರು. ಗುಲ್ಬರ್ಗ, ಬೆಳಗಾವಿ, ಬಳ್ಳಾರಿ ಹಾಗೂ ಮೈಸೂರು ಜಿಲ್ಲೆಗಳಲ್ಲಿಯೂ ಪೊಲೀಸ್ ವರಿಷ್ಠಾಧಿಕಾರಿಯಾಗಿ ಮಡಿಯಾಳ್ ಕೆಲಸ ಮಾಡಿ ಅನುಭವ ಗಳಿಸಿದ್ದಾರೆ.
(ಇನ್ಫೋ ವಾರ್ತೆ)
ಮುಖಪುಟ / ಇವತ್ತು... ಈ ಹೊತ್ತು...