ತ್ವರಿತ ಅಲರ್ಟ್ ಗಳಿಗಾಗಿ
For Daily Alerts
ರಾಜ್ಯಮಟ್ಟದ ದಾಸ ಸಾಹಿತ್ಯ ಸಮ್ಮೇಳನಕ್ಕೆ ಸಿದ್ಧವಾಗುತ್ತಿರುವ ಧರ್ಮಸ್ಥಳ
ಉಜಿರೆ : ಧರ್ಮಸ್ಥಳದ ಶಾಂತಿವನ ಟ್ರಸ್ಟ್, ಹಂಪಿ ಕನ್ನಡ ವಿಶ್ವವಿದ್ಯಾಲಯದ ಪುರಂದರ ದಾಸರ ಅಧ್ಯಯನ ಪೀಠ ಹಾಗೂ ತಿರುಪತಿ ದೇವಸ್ಥಾನದ ದಾಸ ಸಾಹಿತ್ಯ ಯೋಜನೆಯ ಆಶ್ರಯದಲ್ಲಿ ಅಕ್ಟೋಬರ್ 18ರಿಂದ ಮೂರು ದಿನಗಳ ಕಾಲ ಧರ್ಮಸ್ಥಳದಲ್ಲಿ ರಾಜ್ಯಮಟ್ಟದ ದಾಸ ಸಾಹಿತ್ಯ- ಸಂಸ್ಕೃತಿ ಸಮ್ಮೇಳನ ನಡೆಯಲಿದೆ.
ಸಮ್ಮೇಳನದ ಅಧ್ಯಕ್ಷತೆಯನ್ನು ಪ್ರೊ. ಎಸ್. ಕೆ. ರಾಮಚಂದ್ರರಾವ್ ವಹಿಸುವರು. ಪೇಜಾವರ ಮಠದ ವಿಶ್ವೇಶತೀರ್ಥ ಸ್ವಾಮೀಜಿ ಸಮ್ಮೇಳನವನ್ನು ಉದ್ಘಾಟಿಸುವರು. ಸಮ್ಮೇಳನ ನಡೆಯುವ ಸ್ಥಳ- ಧರ್ಮಸ್ಥಳದ ಸಮ್ಯಕ್ ಜ್ಞಾನ ಭವನ.
ಮೂರು ದಿನಗಳ ಕಾಲ ನಡೆಯುವ ಈ ಸಮ್ಮೇಳನದಲ್ಲಿ ದಾಸರ ಪದಗದಳ ಧ್ವನಿ ಸುರುಳಿಗಳು, ಸಿ.ಡಿ. ಹಾಗೂ ಪುಸ್ತಕ ಪ್ರದರ್ಶನ, ಕಥಾ ಕೀರ್ತನೆ, ದಾಸ ಸಾಹಿತ್ಯ- ಸಂಗೀತ ಪ್ರಾತ್ಯಕ್ಷಿಕೆ, ನಾಟ್ಯ ವಿದುಷಿ ಪ್ರತಿಭಾ ಪ್ರಹ್ಲಾದ್ ಅವರಿಂದ ಭರತನಾಟ್ಯ ಮತ್ತಿತರ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ.
(ಇನ್ಫೋ ವಾರ್ತೆ)
ಮುಖಪುಟ / ಇವತ್ತು... ಈ ಹೊತ್ತು...
Story first published: Monday, October 7, 2002, 5:30 [IST]