ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಉತ್ತರ ಕರ್ನಾಟಕದಲ್ಲಿ ನವೆಂಬರ್‌1ರಂದು ಪ್ರತ್ಯೇಕತೆಯ ಬಾವುಟ

By Staff
|
Google Oneindia Kannada News

ಗುಲ್ಬರ್ಗ : ನವೆಂಬರ್‌ 1ರ ಕನ್ನಡ ರಾಜ್ಯೋತ್ಸವದಂದು ಹೈದರಾಬಾದ್‌ ಕರ್ನಾಟಕ ಪ್ರದೇಶದ ಎಲ್ಲ ಜಿಲ್ಲಾ ಕೇಂದ್ರ ಸ್ಥಾನಗಳಲ್ಲಿ ಪ್ರತ್ಯೇಕ ಧ್ವಜ ಹಾರಿಸಲು ನಿರ್ಧರಿಸಲಾಗಿದೆ.

ಈ ವಿಷಯವನ್ನು ಹೈದರಾಬಾದ್‌ ಕರ್ನಾಟಕ ಹೋರಾಟ ಸಮಿತಿ ಅಧ್ಯಕ್ಷ ಹಾಗೂ ಮಾಜಿ ಸಚಿವ ವೈಜನಾಥ್‌ ಪಾಟೀಲ್‌ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. ಕಳೆದ ವರ್ಷವೂ ಈ ಪ್ರದೇಶದಲ್ಲಿ ಪ್ರತ್ಯೇಕ ಧ್ವಜವನ್ನು ಹಾರಿಸಲಾಗಿತ್ತು.

ಹೈದರಾಬಾದ್‌ ಕರ್ನಾಟಕ ಪ್ರದೇಶವನ್ನು ರಾಜ್ಯ ಸರಕಾರ ನಿರ್ಲಕ್ಷಿಸುತ್ತ ಬಂದಿರುವುದನ್ನು ಪ್ರತಿಭಟಿಸಿ ಈ ರೀತಿ ಪ್ರತ್ಯೇಕ ಧ್ವಜ ಹಾರಿಸಲು ಸಮಿತಿಯ ಮುಖಂಡರು ನಿರ್ಧರಿಸಿದ್ದಾರೆ. ಉತ್ತರ ಕರ್ನಾಟಕಕ್ಕೆ ಆಗಿರುವ ಅನ್ಯಾಯವನ್ನು ಪ್ರತಿಭಟಿಸುವುದು ಹಾಗೂ ಪ್ರತ್ಯೇಕ ರಾಜ್ಯಕ್ಕಾಗಿ ಹೋರಾಡುವುದು ನಮ್ಮ ಉದ್ದೇಶ ಎಂದು ವೈಜನಾಥ್‌ ಪಾಟೀಲ್‌ ತಿಳಿಸಿದ್ದಾರೆ. ಗುಲ್ಬರ್ಗ, ರಾಯಚೂರು, ಬೀದರ್‌, ಬಳ್ಳಾರಿ, ಕೊಪ್ಪಳಗಳಲ್ಲಿ ಪ್ರತ್ಯೇಕ ಧ್ವಜ ಹಾರಿಸಲಾಗುತ್ತದೆ.

(ಇನ್ಫೋ ವಾರ್ತೆ)

ಮುಖಪುಟ / ಇವತ್ತು... ಈ ಹೊತ್ತು...

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X