ತ್ವರಿತ ಅಲರ್ಟ್ ಗಳಿಗಾಗಿ
For Daily Alerts
ಸರ್ಕಾರ ನೀರು ಬಿಟ್ಟರೆ ಅ.28 ರಿಂದ ಜೈಲ್ ಭರೋ
ಮಂಡ್ಯ : ಸುಪ್ರಿಂಕೋರ್ಟ್ನ ನಿರ್ದೇಶನಕ್ಕೆ ಮಣಿದು ತಮಿಳುನಾಡಿಗೆ ನೀರು ಬಿಡುವ ನಿಲುವನ್ನು ರಾಜ್ಯ ಸರ್ಕಾರ ತಳೆದಲ್ಲಿ ಅಕ್ಟೋಬರ್ 28 ರಿಂದ ಜೈಲ್ ಭರೋ ಚಳವಳಿ ಹಮ್ಮಿಕೊಳ್ಳಲಾಗುವುದು ಎಂದು ಮಂಡ್ಯ ಜಿಲ್ಲಾ ರೈತರ ಹಿತರಕ್ಷಣಾ ಸಮಿತಿ ಅಧ್ಯಕ್ಷ ಜಿ.ಮಾದೇಗೌಡ ಎಚ್ಚರಿಕೆ ನೀಡಿದ್ದಾರೆ
ಅ.28 ರಂದು ಅಪೆಕ್ಸ್ ನ್ಯಾಯಾಲಯ ನೀಡುವ ತೀರ್ಪನ್ನು ಅವಲಂಬಿಸಿ ಮುಂದಿನ ಹೋರಾಟವನ್ನು ಕೈಗೊಳ್ಳಲು ಶುಕ್ರವಾರ (ಅ.25) ಸಭೆ ಸೇರಿದ ಹಿತರಕ್ಷಣಾ ಸಮಿತಿ ನಿರ್ಧರಿಸಿದೆ ಎಂದು ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಮಾದೇಗೌಡ ಹೇಳಿದರು.
ಅ.28 ರಂದು ಮತ್ತೊಮ್ಮೆ ಹಿತರಕ್ಷಣಾ ಸಮಿತಿ ಸಭೆ ಸೇರುವುದು. ಎಲ್ಲ ರಾಜಕೀಯ ಪಕ್ಷಗಳ ಮುಖಂಡರನ್ನು ಆ ಸಭೆಗೆ ಆಹ್ವಾನಿಸಲಾಗುವುದು ಎಂದು ಮಾದೇಗೌಡ ತಿಳಿಸಿದರು.
(ಪಿಟಿಐ)
ಮುಖಪುಟ / ಕಾವೇರಿ ಕನ್ನಡಿ
Comments
Story first published: Friday, October 25, 2002, 5:30 [IST]