ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಮಂಡ್ಯ: ರಜೆಗೆ ರಜಾ, ಶಾಲಾ ಕಾಲೇಜು ಪ್ರಾರಂಭ

By Staff
|
Google Oneindia Kannada News

ಮಂಡ್ಯ : ಕಾವೇರಿ ಚಳವಳಿಯ ಹಿನ್ನೆಲೆಯಲ್ಲಿ ಬಾಗಿಲು ಮುಚ್ಚಿದ್ದ ಶಾಲಾ ಕಾಲೇಜುಗಳು ನ.7 ರ ಗುರುವಾರ ಬಾಗಿಲು ತೆರೆಯುವುದರೊಂದಿಗೆ ಮಂಡ್ಯ ನಗರ ಹೆಚ್ಚೂ ಕಡಿಮೆ ಮಾಮೂಲಿ ಸ್ಥಿತಿಗೆ ಮರಳಿದೆ.

ಈ ನಡುವೆ ಬೆಂಗಳೂರು-ಮೈಸೂರು ನಡುವಿನ ರೈಲು ಸಂಚಾರ ಗುರುವಾರ ಪ್ರಾರಂಭವಾಯಿತಾದರೂ, ಪ್ರಯಾಣಿಕರ ಸಂಖ್ಯೆ ತೀರಾ ಕಡಿಮೆಯಿತ್ತು . ರಸ್ತೆ ಸಂಚಾರ ಸುಗಮವಾಗಿದ್ದು ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಬಸ್ಸುಗಳು ಸುಗಮವಾಗಿ ಸಂಚರಿಸುತ್ತಿವೆ. ನಿಷೇಧಾಜ್ಞೆಯನ್ನು ತೆರವುಗೊಳಿಸಿರುವುದರಿಂದ ವಾಣಿಜ್ಯ ಚಟುವಟಿಕೆಗಳು ಕೂಡ ನಿಧಾನವಾಗಿ ಕಳೆಯೇರುತ್ತಿವೆ. ಕೃಷ್ಣರಾಜ ಸಾಗರ ಜಲಾಶಯ ಪ್ರದೇಶವನ್ನು ಹೊರತುಪಡಿಸಿದರೆ, ಉಳಿದೆಡೆಗಳಲ್ಲಿ ನಿಷೇಧಾಜ್ಞೆಯನ್ನು ತೆರವುಗೊಳಿಸಲಾಗಿದೆ.

ಒಂದೆಡೆ ಜನ ಜೀವನ ಮಾಮೂಲಿ ಸ್ಥಿತಿಗೆ ಮರಳುತ್ತಿದ್ದರೂ, ಚಳವಳಿಕಾರರ ಶಾಂತಿಯುತ ಧರಣಿ ಸತ್ಯಾಗ್ರಹ ಇನ್ನೊಂದೆಡೆ ಮುಂದುವರಿದಿದೆ. ರೈತ ಹಿತರಕ್ಷಣಾ ಸಮಿತಿ ಅಧ್ಯಕ್ಷ ಜಿ.ಮಾದೇಗೌಡ, ಶಾಸಕರಾದ ಎಂ.ಎಸ್‌.ಆತ್ಮಾನಂದ ಹಾಗೂ ಚೌಡಯ್ಯ ಅವರ ನೇತೃತ್ವದಲ್ಲಿ , ಸಿಲ್ವರ್‌ ಜ್ಯೂಬಿಲಿ ಪಾರ್ಕ್‌ನಲ್ಲಿ ಸತ್ಯಾಗ್ರಹ ನಡೆಯುತ್ತಿದೆ.

(ಇನ್ಫೋ ವಾರ್ತೆ)

ಮುಖಪುಟ / ಕಾವೇರಿ ಕನ್ನಡಿ

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X