ಬೆಂಗಳೂರಲ್ಲಿ ಗಿಟ್ಟದ ವ್ಯಾಪಾರ ಮೈಸೂರಲ್ಲಿ ಗಿಟ್ಟೀತೆ ?
*ದಟ್ಸ್ಕನ್ನಡ ಬ್ಯೂರೊ
ಕಾವೇರಿ ಕಾವಿನ ಹಿನ್ನೆಲೆಯಲ್ಲಿ ಏಷ್ಯಾದ ಪ್ರತಿಷ್ಠಿತ ಐಟಿ ಉತ್ಸವವಾದ ಬೆಂಗಳೂರು ಐಟಿಡಾಟ್ಕಾಂ-2002 ಬೋರಲು ಬಿದ್ದದ್ದನ್ನು ಮರೆತು, ಮೈಸೂರು ಐಟಿ.ಕಾಂ ಉತ್ಸವವನ್ನು ವೈಭವದಿಂದ ನಡೆಸಲು ಮುಖ್ಯಮಂತ್ರಿ ಎಸ್ಸೆಂ.ಕೃಷ್ಣ ಸರ್ಕಾರ ನಿರ್ಧರಿಸಿದೆ.
ಇನ್ನೂ ಅಲ್ಲಲ್ಲಿ ಕಾವೇರಿ ಕಾವಿನ ಹವೆ ಸುಳಿದಾಡುತ್ತಿದ್ದರೂ. ಡಿಸೆಂಬರ್ ತಿಂಗಳ ಕೊನೆ ವಾರದಲ್ಲಿ ಮೈಸೂರಿನ ಚಾಮುಂಡಿ ವಿಹಾರ ಕ್ರೀಡಾಂಗಣದಲ್ಲಿ ಪ್ರತಿಷ್ಠಿತ ಐಟಿ ಉತ್ಸವ ನಡೆಸಲು ಸರ್ಕಾರ ಸಿದ್ಧತೆಗಳನ್ನು ನಡೆಸಿದೆ. ಮೈಸೂರು ಐಟಿ.ಕಾಂ-2002 ಮೇಳದಲ್ಲಿ ಭಾಗವಹಿಸಲು ಖಾಸಗಿಯರ ಉತ್ಸಾಹ ಈ ಸಲ ಜೋರಾಗಿದೆ. ಉತ್ಸವದ ಯಶಸ್ಸಿಗೆ ಸರ್ಕಾರದೊಂದಿಗೆ ಎಸ್ಟಿಪಿಐ, ಬಿಎಸ್ಎನ್ಎಲ್ ಹಾಗೂ ಸಿಲಿಕಾನ್ ವ್ಯಾಲಿಯ ಪ್ರತಿಷ್ಠಿತ ಕಂಪನಿಗಳಾದ ಇನ್ಫೋಸಿಸ್ ಮತ್ತು ವಿಪ್ರೋ ಕೈ ಜೋಡಿಸಿವೆ ಎನ್ನುತ್ತಾರೆ ಸಹಕಾರ ಸಚಿವ ಎಚ್.ವಿಶ್ವನಾಥ್.
ಅಕ್ಟೋಬರ್ ತಿಂಗಳಿನಲ್ಲಿಯೇ ಮೈಸೂರು ಐಟಿ.ಕಾಂ ಉತ್ಸವ ನಡೆಯಬೇಕಾಗಿತ್ತು. ಆದರೆ, ಅನಿರೀಕ್ಷಿತವಾಗಿ ಸುಳಿದ ಕಾವೇರಿ ಸುಳಿಗಾಳಿಯಲ್ಲಿ ಉತ್ಸವ ಡಿಸೆಂಬರ್ಗೆ ವರ್ಗಾವಣೆಯಾಗಿದೆ. ಡಿಸೆಂಬರ್ ಹೊತ್ತಿಗೆ ಕಾವೇರಿ ಕೊಳ್ಳದಲ್ಲಿ ಸಂಪೂರ್ಣ ಶಾಂತಿ ನೆಲೆಸುತ್ತಾ ? ಆಶಾವಾದಿ ವಿಶ್ವನಾಥ್ ತುಟಿಪಿಟಿಕ್ ಎನ್ನುವುದಿಲ್ಲ.
ಬೆಂಗಳೂರು ಐಟಿ.ಕಾಂ ಮೇಳಕ್ಕೆ ರಂಗು ತಂದ ರಾಷ್ಟ್ರಪತಿ ಎಪಿಜೆ ಅಬ್ದುಲ್ ಕಲಾಂ ಅವರನ್ನು ಮೈಸೂರು ಐಟಿ.ಕಾಂ ಉತ್ಸವದ ಉದ್ಘಾಟನೆಗೂ ಆಹ್ವಾನಿಸುವ ಮನಸ್ಸು ಸರ್ಕಾರಕ್ಕಿದೆ. ಡಿಸೆಂಬರ್ ಕೊನೆಯಲ್ಲಿ ಮೈಸೂರಿನಲ್ಲಿ ನಡೆಯುವ ಸೈನ್ಸ್ ಕಾಂಗ್ರೆಸ್ ಮೇಳವನ್ನು ಉದ್ಘಾಟಿಸಲು ರಾಷ್ಟ್ರಪತಿ ಮೈಸೂರಿಗೆ ಬರುವ ಕಾರ್ಯಕ್ರಮವಿದೆ. ಈ ಸಂದರ್ಭವನ್ನು ಬಳಸಿಕೊಳ್ಳುವ ಯೋಜನೆ ಸರ್ಕಾರದ್ದು ಎನ್ನುತ್ತಾರೆ ವಿಶ್ವನಾಥ್.
ಈ ಬಾರಿ 125 ಕ್ಕೂ ಹೆಚ್ಚು ಕಂಪನಿಗಳು ಐಟಿ ಉತ್ಸವದಲ್ಲಿ ಭಾಗಿಯಾಗುವ ನಿರೀಕ್ಷೆಯಿದೆ. ಈಗಾಗಲೇ ಶೇ.75 ರಷ್ಟು ಪ್ರದರ್ಶನ ಮಳಿಗೆಗಳು ಬುಕ್ ಆಗಿವೆ. ವಿದೇಶಿ ಕಂಪನಿಗಳ ಭಾಗವಹಿಸುವಿಕೆಯನ್ನು ಖಚಿತಪಡಿಸಿಕೊಳ್ಳಲಾಗುತ್ತಿದೆ ಎಂದು ಸಚಿವ ವಿಶ್ವನಾಥ್ ಅಂಕಿಅಂಶ ನೀಡುತ್ತಾರೆ.
ಅಂದಹಾಗೆ, ಮೈಸೂರು ಐಟಿ.ಕಾಂ-2002 ಮೇಳದ ಹೈಲೈಟ್ ಏನಪ್ಪಾ ಅಂದರೆ-ಹೂಡಿಕೆದಾರರ ಸಮಾವೇಶದಲ್ಲಿ ಸಿಲಿಕಾನ್ ವ್ಯಾಲಿಯ ಐಟಿ ನಾಯಕರ ಜೊತೆ ವಿಡಿಯಾ ಕಾನ್ಫರೆನ್ಸ್.
ಮುಖಪುಟ / ಕರ್ನಾಟಕ ಸಿಲಿಕಾನ್ ಕಣಿವೆ
-
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
Bengaluru: ಪಬ್ನಲ್ಲಿ 150 ರೂ. ಕೊಟ್ಟು ಆರ್ಡರ್ ಮಾಡಿದ್ರೆ ಬಂದಿದ್ದು ಬರೀ ಹಪ್ಪಳ-ಸಂಡಿಗೆ: ದಂಗಾದ ಗ್ರಾಹಕ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ












Click it and Unblock the Notifications