ತ್ವರಿತ ಅಲರ್ಟ್ ಗಳಿಗಾಗಿ
For Daily Alerts
ಕಾವೇರಿನ್ಯಾಯಾಧಿಕರಣದ ಸದಸ್ಯಅಗರವಾಲ್ ನಿಧನ
ನವದೆಹಲಿ : ಕಾವೇರಿ ಜಲ ವಿವಾದ ನ್ಯಾಯಾಧಿಕರಣದ ಸದಸ್ಯ ನ್ಯಾಯಮೂರ್ತಿ ಎಸ್.ಪಿ.ಅಗರವಾಲ್ ಮಂಗಳವಾರ ನಿಧನರಾದರು. ಅವರಿಗೆ 70 ವರ್ಷ ವಯಸ್ಸಾಗಿತ್ತು . ಅಗರ್ವಾಲ್ ಅವರು ವಿಶ್ವ ಹಿಂದೂ ಪರಿಷತ್ನ ಹಿರಿಯ ಮುಖಂಡ ಅಶೋಕ್ ಸಿಂಘಾಲ್ ಅವರ ಸಂಬಂಧಿ.
1962 ರಲ್ಲಿ ಅಲಹಾಬಾದ್ ಹೈಕೋರ್ಟ್ನಲ್ಲಿ ವೃತ್ತಿ ಜೀವನ ಪ್ರಾರಂಭಿಸಿದ ಅಗರವಾಲ್, 1992 ರಲ್ಲಿ ಪಂಜಾಬ್-ಹರಿಯಾಣ ಹೈಕೋರ್ಟ್ ಮುಖ್ಯ ನ್ಯಾಯಾಧೀಶರಾಗಿ ನೇಮಕಗೊಂಡು 1994 ರಲ್ಲಿ ಸೇವೆಯಿಂದ ನಿವೃತ್ತರಾಗಿದ್ದರು. 1990 ರಲ್ಲಿ ಕಾವೇರಿ ನ್ಯಾಯಾಧಿಕರಣ ಪ್ರಾರಂಭವಾದ ದಿನದಿಂದಲೂ ಅಗರವಾಲ್ ನ್ಯಾಯಾಧಿಕರಣದ ಸದಸ್ಯರಾಗಿದ್ದಾರೆ.
(ಇನ್ಫೋ ವಾರ್ತೆ)
ಮುಖಪುಟ / ಕಾವೇರಿ ಕನ್ನಡಿ
Comments
Story first published: Wednesday, November 27, 2002, 5:30 [IST]