ನಾಗಪ್ಪನವರ ಸಾವಿಗೆ ವರನಟ ರಾಜ್ಕುಮಾರ್ ಕಂಬನಿ
ಬೆಂಗಳೂರು : ಅವರು ತುಂಬಾ ಒಳ್ಳೆಯ ವ್ಯಕ್ತಿ . ಅವರಿಗೆ ಹೀಗಾಗಬಾರದಿತ್ತು . ಅವರ ಸಾವು ತಮಗೆ ತುಂಬಾ ನೋವು ಉಂಟು ಮಾಡಿದೆ ಎಂದು ವೀರಪ್ಪನ್ ಒತ್ತೆಯಾಳಾಗಿದ್ದ ಮಾಜಿ ಸಚಿವ ನಾಗಪ್ಪನವರ ಸಾವಿನ ಕುರಿತು ವರನಟ ಡಾ.ರಾಜ್ಕುಮಾರ್ ಕಂಬನಿ ಮಿಡಿದಿದ್ದಾರೆ.
ನಾನು 108 ದಿನಗಳ ಕಾಲ ವೀರಪ್ಪನ್ ಸೆರೆಯಲ್ಲಿದ್ದು ಬದುಕಿ ಬಂದೆ, ನಾಗಪ್ಪನವರು ಬರಲಿಲ್ಲ . ಅವರ ಸಾವು ಅತ್ಯಂತ ದುರದೃಷ್ಟಕರ ಹಾಗೂ ಶೋಚನೀಯ ಎಂದು ನಾಗಪ್ಪನವರ ಸಾವಿನ ಸುದ್ದಿ ತಿಳಿದ ರಾಜ್ ಪ್ರತಿಕ್ರಿಯಿಸಿದರು.
ನಾಗಪ್ಪನವರು ಸುರಕ್ಷಿತವಾಗಿ ಬಿಡುಗಡೆ ಹೊಂದುತ್ತಾರೆ, ಯೋಚಿಸಬೇಡಿ ಎಂದು ಅವರ ಕುಟುಂಬಕ್ಕೆ ಸಾಂತ್ವನ ಹೇಳಿದ್ದೆ . ಆದರೆ, ಈಗ ಪರಿಸ್ಥಿತಿ ಬದಲಾಗಿದೆ ಎಂದು ರಾಜ್ ನೋವಿನಿಂದ ನುಡಿದರು. ನಾಗಪ್ಪನವರ ಅಗಲಿಕೆಯನ್ನು ಸಹಿಸಿಕೊಳ್ಳುವ ಶಕ್ತಿಯನ್ನು ಅವರ ಕುಟುಂಬಕ್ಕೆ ನೀಡುವಂತೆ ದೇವರನ್ನು ಪ್ರಾರ್ಥಿಸುವುದಾಗಿ ರಾಜ್ ಹೇಳಿದರು.
ತಮಗೆ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ಬಂದ ಸಂದರ್ಭದಲ್ಲಿ , ಆಗ ಸಚಿವರಾಗಿದ್ದ ನಾಗಪ್ಪನವರು ಕೊಳ್ಳೇಗಾಲದಲ್ಲಿ ಸನ್ಮಾನ ಸಮಾರಂಭ ಏರ್ಪಡಿಸಿದುದನ್ನು ಸ್ಮರಿಸಿಕೊಂಡ ರಾಜ್, ಅದೊಂದು ಮರೆಯಲಾಗದ ನೆನಪು ಎಂದು ಭಾವುಕರಾದರು.
(ಇನ್ಫೋ ವಾರ್ತೆ)
ಮುಖಪುಟ / ವೀರಪ್ಪನ್ ಶಿಕಾರಿ
-
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ












Click it and Unblock the Notifications