ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕಲ್ಕಿ ಭಗವಾನರಿಂದ ಭಕ್ತರ ಹಣ ದುರುಪಯೋಗ ?

By Staff
|
Google Oneindia Kannada News

ಚೆನ್ನೈ: ಸಾರ್ವಜನಿಕ ಹಣವನ್ನು ದುರುಪಯೋಗ ಪಡಿಸಿಕೊಂಡು ಕಲ್ಕಿ ಭಗವಾನ್‌ ಕುರಿತ ಚಟುವಟಿಕೆಗಳು ನಡೆಯುತ್ತಿದ್ದು ಈ ಬಗ್ಗೆ ವಿಸ್ತುತ ತನಿಖೆ ನಡೆಸುವಂತೆ ಮದ್ರಾಸ್‌ ಹೈಕೋರ್ಟ್‌ ತಮಿಳುನಾಡು ಸರಕಾರಕ್ಕೆ ನೋಟಿಸ್‌ ಜಾರಿ ಮಾಡಿದೆ.

ಕಲ್ಕಿ ಪಂಥದ ಮುಖ್ಯಸ್ಥ ವಿ. ವಿಜಯಕುಮಾರ್‌( ಅಂದರೆ ಕಲ್ಕಿ ಭಗವಾನ್‌) ಮತ್ತು ಅವರ ಬಳಗ, ವಿವಿಧ ಧಾರ್ಮಿಕ ಮತ್ತು ಶೈಕ್ಷಣಿಕ ಚಟುವಟಿಕೆಗಳ ಹೆಸರಿನಲ್ಲಿ ಸಾರ್ವಜನಿಕರ ಹಣ ದುರುಪಯೋಗ ಪಡಿಸಿಕೊಳ್ಳುತ್ತಿದ್ದಾರೆ. ಅಲ್ಲದೆ ಸಾರ್ವಜನಿಕರಿಂದ ಸಂಗ್ರಹಿಸಿದ ಹಣವನ್ನು ಖಾಸಗಿ ಜೀವನಕ್ಕೆ ಬಳಸಿಕೊಳ್ಳುತ್ತಿದ್ದಾರೆ ಎಂದು ಕಲ್ಕಿ ಭಗವಾನರ ಮಾಜಿ ಅನುಯಾಯಿ ವಿಶ್ವನಾಥ ಸ್ವಾಮಿ ಕೆಲ ದಿನಗಳ ಹಿಂದೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು.

ಮದ್ರಾಸ್‌ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಬಿ. ಸುಭಾಷ್‌ ರೆಡ್ಡಿ ಮತ್ತು ಸಿ. ನಾಗಪ್ಪನ್‌ ಅವರನ್ನೊಳಗೊಂಡ ವಿಭಾಗೀಯ ಪೀಠ ಈ ಅರ್ಜಿಯ ವಿಚಾರಣೆ ನಡೆಸಿ ತಮಿಳುನಾಡು ಸರಕಾರಕ್ಕೆ ನೋಟಿಸ್‌ ನೀಡಿದೆ.

ಕಲ್ಕಿ ಪಂಥದ ಹಲವು ಟ್ರಸ್ಟ್‌ಗಳಲ್ಲಿ ವಿಜಯ ಕುಮಾರ್‌ ಅವರ ಬಂಧುಗಳೇ ಸೇರಿಕೊಂಡಿದ್ದಾರೆ. ಅವರೆಲ್ಲರೂ ಟ್ರಸ್ಟ್‌ನ ಆರ್ಥಿಕ ಲಾಭವನ್ನು ಖಾಸಗಿ ಜೀವನಕ್ಕೆ ಬಳಸಿಕೊಳ್ಳುತ್ತಿದ್ದಾರೆ ಎಂದು ವಿಶ್ವನಾಥ ಸ್ವಾಮಿ ಆರೋಪಿಸಿದ್ದಾರೆ.

(ಇನ್ಫೋ ವಾರ್ತೆ)

ಮುಖಪುಟ / ಇವತ್ತು... ಈ ಹೊತ್ತು...

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X