ಸುತ್ತೂರು ಸ್ವಾಮೀಜಿ ಮೇಲೆ ವೀರಪ್ಪನ್ ಕಣ್ಣು ?
ಮೈಸೂರು : ನರಹಂತಕ ವೀರಪ್ಪನ್ನ ಮುಂದಿನ ಬಲಿ ಸುತ್ತೂರು ಸ್ವಾಮೀಜಿಗಳೆನ್ನುವ ಪತ್ರಿಕಾ ವರದಿಗಳ ಹಿನ್ನೆಲೆಯಲ್ಲಿ ತೀವ್ರ ಆತಂಕ ವ್ಯಕ್ತಪಡಿಸಿರುವ ಸುತ್ತೂರು ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ, ಈ ರಾಜ್ಯದಲ್ಲಿ ಯಾರಿಗೂ ರಕ್ಷಣೆಯೇ ಇಲ್ಲವಾಗಿದೆ ಎಂದು ವಿಷಾದಿಸಿದ್ದಾರೆ.
ಮಾಜಿ ಸಚಿವ ಎಚ್.ನಾಗಪ್ಪನವರ ಹತ್ಯೆಯ ಹಿನ್ನೆಲೆಯ ಪೂರ್ವಾಪರಗಳನ್ನು ಚರ್ಚಿಸಲು ಮೈಸೂರಿನಲ್ಲಿ ಶುಕ್ರವಾರ ನಡೆದ ವೀರಶೈವ ಮುಖಂಡರ ಸಭೆಯಲ್ಲಿ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಮಾತನಾಡುತ್ತಿದ್ದರು.
ವೀರಪ್ಪನ್ನ ಮುಂದಿನ ಬಲಿ ತಾವೇ ಎಂದು ತಮಿಳು ಪತ್ರಿಕೆಯಾಂದು ಬರೆದಿದೆ. ನಾಗಪ್ಪನವರಂಥ ಗಣ್ಯರಿಗೇ ರಕ್ಷಣೆ ಇಲ್ಲವೆಂದ ಮೇಲೆ ನಮ್ಮ ರಕ್ಷಣೆಯನ್ನು ನಾವೇ ಮಾಡಿಕೊಳ್ಳಬೇಕಾದ ಪರಿಸ್ಥಿತಿ ಒದಗಿದೆ ಎಂದು ಸ್ವಾಮೀಜಿ ಹೇಳಿದರು. ನಾಗಪ್ಪನವರ ಹತ್ಯೆಯ ರಹಸ್ಯವನ್ನು ಬಯಲಿಗೆಳೆಯಲು ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸುವಂತೆ ಅವರು ಸರ್ಕಾರವನ್ನು ಒತ್ತಾಯಿಸಿದರು.
ನಾಗಪ್ಪನವರನ್ನು ಸುರಕ್ಷಿತವಾಗಿ ಕರೆತರುವಲ್ಲಿ ಸರ್ಕಾರ ನಡೆಸಿದ ಪ್ರಯತ್ನಗಳ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ ಸ್ವಾಮೀಜಿ, ಸರ್ಕಾರ ತನ್ನ ಕ್ರಮಗಳ ಮೂಲಕ ಜನತೆಯ ವಿಶ್ವಾಸ ಗಳಿಸಿಲ್ಲ ಎಂದರು. ರಾಜ್ಕುಮಾರ್ ಪ್ರಕರಣದಲ್ಲಿ ಕೈಗೊಂಡ ಬಿಗು ಕ್ರಮಗಳನ್ನು ನಾಗಪ್ಪನವರ ಪ್ರಕರಣದಲ್ಲಿ ಸರ್ಕಾರ ಕೈಗೊಳ್ಳಲಿಲ್ಲ ಎಂಬುದು ಎಲ್ಲರ ಅಭಿಪ್ರಾಯವಾಗಿರುವುದಾಗಿ ಅವರು ಹೇಳಿದರು.
ಶಾಸಕರಾದ ಎ. ಎಸ್.ಗುರುಸ್ವಾಮಿ, ಮಹದೇವ ಪ್ರಸಾದ ಎಚ್. ಎಸ್, ಹಾಗೂ ನಿಜಗುಣ ಶಿವಯೋಗಿ ಸಭೆಯಲ್ಲಿ ಹಾಜರಿದ್ದರು.
(ಇನ್ಫೋ ವಾರ್ತೆ)
ಮುಖಪುಟ / ವೀರಪ್ಪನ್ ಶಿಕಾರಿ
-
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
ಆರ್ಸಿಬಿ ಗೆಲ್ಲಿಸಿದ ಕೊಹ್ಲಿ ಕಂಡು ಗ್ಯಾಲರಿಯಲ್ಲೇ ಕುಣಿದು ಕುಪ್ಪಳಿಸಿದ ಅನನ್ಯಾ ಬಿರ್ಲಾ: ಭಾರೀ ವೈರಲ್ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
Bengaluru: 19 ಸಾವಿರಕ್ಕೆ 2BHK ಮನೆ ಸಿಕ್ಕಿದ್ದೇಗೆ? 4 ವರ್ಷದಲ್ಲಿ 3 ಮನೆ ಬದಲಾಯಿಸಿದ ದಂಪತಿ ಹೇಳಿದ ಬಾಡಿಗೆ ಸೀಕ್ರೆಟ್ Viral -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
New Railway Line: ಗದಗ-ಹೊಟಗಿ ರೈಲು ಡಬ್ಲಿಂಗ್ ಪೂರ್ಣ, ಮಹಾರಾಷ್ಟ್ರವರೆಗೂ ಸಂಚಾರ ಸುಧಾರಣೆ












Click it and Unblock the Notifications