6 ಜಿಲ್ಲೆಗಳಲ್ಲಿ ಗಣಿಗಾರಿಕೆ ನಡೆಸಲು ಸಂಪುಟ ಅನುಮತಿ
ಬೆಂಗಳೂರು: ಪಶ್ಚಿಮ ಘಟ್ಟಗಳು ಚಾಚಿಕೊಂಡಿರುವ ಆರು ಜಿಲ್ಲೆ ಸೇರಿದಂತೆ ರಾಜ್ಯದ ಒಟ್ಟು ಹನ್ನೆರಡು ಜಿಲ್ಲೆಗಳಲ್ಲಿ ಗಣಿಗಾರಿಕೆಗೆ ಅನುಮತಿ ನೀಡಲು ರಾಜ್ಯ ಸಚಿವ ಸಂಪುಟ ನಿರ್ಧರಿಸಿದೆ.
ಸಂಪನ್ಮೂಲ ಹೊಂದಿಸುವ ಉದ್ದೇಶದಿಂದ ಗಣಿಗಾರಿಕೆ ಕಾನೂನಿನ ನಿಯಮ(17)ಕ್ಕೆ ತಿದ್ದುಪಡಿ ತರುವ ಮೂಲಕ 11, 620 ಚದರ ಕಿಲೋಮೀಟರ್ ಪ್ರದೇಶದಲ್ಲಿ ಗಣಿಗಾರಿಕೆಗೆ ಅನುಮತಿ ನೀಡಲಾಗುತ್ತದೆ ಎಂದು ವಾರ್ತಾ ಸಚಿವ ಕಾಗೋಡು ತಿಮ್ಮಪ್ಪ ಸೋಮವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.
ಈ ಹೊಸ ತೀರ್ಮಾನದಂತೆ ಗಣಿಗಾರಿಕೆ ವ್ಯಾಪ್ತಿಗೆ ಬರುವ ಜಿಲ್ಲೆಗಳು ಉತ್ತರ ಕನ್ನ, ದಕ್ಷಿಣ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಹಾಗೂ ಮೈಸೂರು. ಆದರೆ ಬಳ್ಳಾರಿ, ಬೆಂಗಳೂರು, ಕೋಲಾರ, ಚಿತ್ರದುರ್ಗ, ಬಿಜಾಪುರ ಮತ್ತು ಮಂಡ್ಯ ಜಿಲ್ಲೆಗಳಲ್ಲಿಯೂ ಗಣಿಗಾರಿಕೆಗೆ ಅನುಮತಿ ನೀಡಲಾಗುವುದು. ಕಾಡು ಇಲ್ಲದ, ಸೂಕ್ಷ್ಮ ಪ್ರದೇಶಗಳನ್ನು ಹೊರತುಪಡಿಸಿ ಪಶ್ಚಿಮಘಟ್ಟದ ಭಾಗಗಳಲ್ಲಿ ಗಣಿಗಾರಿಕೆಗೆ ಅವಕಾಶ ಮಾಡಿಕೊಡಲಾಗುವುದು ಎಂದು ಸಚಿವರು ಹೇಳಿದರು.
(ಇನ್ಫೋ ವಾರ್ತೆ)
ಮುಖಪುಟ / ಇವತ್ತು... ಈ ಹೊತ್ತು...