ಸದ್ಯದಲ್ಲೇ ‘ವೀರಪ್ಪನ್ ಸಂತ್ರಸ್ತ’ ರ ಸಮಾವೇಶ
ಮೈಸೂರು: ವೀರಪ್ಪನ್ನಿಂದ ಹತ್ಯೆಗೀಡಾದವರ ಕುಟುಂಬದ ಸದಸ್ಯರ ಸಮಾವೇಶವಂದನ್ನು ಆಯೋಜಿಸಲು ನಿವೃತ್ತ ಡಿವೈಎಸ್ಪಿ ಅಬ್ದುಲ್ ಕರೀಂ ನಿರ್ಧರಿಸಿದ್ದಾರೆ.
ಮಾಜಿ ಸಚಿವ ನಾಗಪ್ಪ ಅವರ ಹತ್ಯೆಯನ್ನು ಸಿಬಿಐ ತನಿಖೆಗೆ ಒಪ್ಪಿಸುವಂತೆ ಸರಕಾರವನ್ನು ಆಗ್ರಹಿಸಲು ವೀರಪ್ಪನ್ ಸಂತ್ರಸ್ತರ ಸಮಾವೇಶ ನಡೆಸಲು ಅಬ್ದುಲ್ ಕರೀಂ ತಯಾರಿ ನಡೆಸುತ್ತಿದ್ದಾರೆ. ಸೋಮವಾರದಂದು ಸುತ್ತೂರು ಮಠದ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿಗಳನ್ನು ಭೇಟಿ ಮಾಡಿದ ನಂತರ ಕರೀಂ ವೀರಪ್ಪನ್ ಸಂತ್ರಸ್ತರ ಸಭೆ ನಡೆಸುವುದಾಗಿ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಸೋಮವಾರ ಸಂಜೆ ಜೆಎಸ್ಎಸ್ ರಾಜೇಂದ್ರ ಭವನದಲ್ಲಿ ನಡೆದ ಪ್ರತಿಪಕ್ಷಗಳ ಸಭೆ ಕೂಡ ನಾಗಪ್ಪ ಹತ್ಯೆ ಪ್ರಕರಣವನ್ನು ಸಿಬಿಐಗೆ ಒಪ್ಪಿಸುವಂತೆ ಕೇಳಿಕೊಂಡಿದೆ. ಅಲ್ಲದೆ ಸರಕಾರದ ಮೇಲೆ ಒತ್ತಡ ಹೇರಲು ಮೈಸೂರು, ಚಾಮರಾಜ ನಗರ ಮತ್ತು ಬೆಂಗಳೂರಿನಲ್ಲಿ ಬೃಹತ್ ರ್ಯಾಲಿ ನಡೆಸಲು ಸಭೆ ನಿರ್ಧರಿಸಿದೆ. ಈ ಪ್ರಕರಣವನ್ನು ಸಿಬಿಐ ತನಿಖೆಗೆ ಒಪ್ಪಿಸುವಂತೆ ಮೈಸೂರು ವಿಭಾಗದಲ್ಲಿ ಒಕ್ಕರಲಿನ ದನಿ ಕೇಳಿಸುತ್ತಿದೆ.
ನಾಗಪ್ಪ ಹತ್ಯೆ ಎರಡೂ ರಾಜ್ಯಗಳಿಗೆ ಸಂಬಂಧಿಸಿದ ವಿಷಯ. ಆದ್ದರಿಂದ ರಾಜ್ಯಕೈಗೊಳ್ಳುವ ತನಿಖೆಯಿಂದ ಯಾವುದೇ ಪ್ರಯೋಜನವಾಗುವುದಿಲ್ಲ. ಬದಲಾಗಿ ಸಿಬಿಐ ತನಿಖೆಯಿಂದ ಮಾತ್ರ ಸತ್ಯ ಹೊರಬೀಳಬಹುದು ಎಂಬ ಅಭಿಪ್ರಾಯ ಸ್ವಾಮೀಜಿಯವರದ್ದು ಎಂದ ಕರೀಂ ವೀರಪ್ಪನ್ ಸಂತ್ರಸ್ತರ ಸಮಾವೇಶದ ದಿನಾಂಕ ಹಾಗೂ ಸ್ಥಳಗಳನ್ನು ಸದ್ಯದಲ್ಲೇ ನಿರ್ಧರಿಸಲಾಗುವುದು ಎಂದರು.
(ಇನ್ಫೋ ವಾರ್ತೆ)
ಮುಖಪುಟ / ವೀರಪ್ಪನ್ ಶಿಕಾರಿ
-
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ












Click it and Unblock the Notifications