ತ್ವರಿತ ಅಲರ್ಟ್ ಗಳಿಗಾಗಿ
For Daily Alerts
ಕಬ್ಬಿಗೆ ನೀರು ಬಿಡದಿದ್ದರೆ ಘೕರಾವ್ : ಮಾದೇಗೌಡ
ಮೈಸೂರು : ಮೈಸೂರು ಹಾಗೂ ಮಂಡ್ಯ ಜಿಲ್ಲೆಯ ರೈತರು, ಸಾಹಿತಿಗಳು ಮತ್ತು ರಾಜಕಾರಣಿಗಳು ಸುಪ್ರಿಂಕೋರ್ಟ್ ಆದೇಶದಂತೆ ತಮಿಳುನಾಡಿಗೆ 4,500 ಕ್ಯೂಸೆಕ್ಸ್ ನೀರನ್ನು ಬಿಡುವ ಕ್ರಮವನ್ನು ವಿರೋಧಿಸಿ ಈಗಾಗಲೇ ಸಣ್ಣ ಪ್ರಮಾಣದಲ್ಲಿ ಪ್ರತಿಭಟನೆ ಶುರುವಿಟ್ಟುಕೊಂಡಿದ್ದಾರೆ.
ಕಾವೇರಿ ಹಿತರಕ್ಷಣಾ ಸಮಿತಿ ಮತ್ತು ಕರ್ನಾಟಕ ರಾಜ್ಯ ರೈತ ಸಂಘದ ಚಳವಳಿಕಾರರು, ರಾಜ್ಯವೇ ಬರದಲ್ಲಿ ಬೇಯುತ್ತಿರುವಾಗ ತಮಿಳುನಾಡಿಗೆ ನೀರು ಬಿಡಬೇಕೆಂಬ ಸುಪ್ರಿಂಕೋರ್ಟ್ ಆದೇಶ ಅವೈಜ್ಞಾನಿಕ ಹಾಗೂ ದುರದೃಷ್ಟಕರ ಎಂದು ಬಣ್ಣಿಸಿದ್ದಾರೆ.
ಸುಪ್ರಿಂಕೋರ್ಟ್ನ ಹುಚ್ಚು ಆದೇಶದಿಂದ ರಾಜ್ಯದ 85 ಲಕ್ಷ ಮಂದಿಗೆ ಹೊಡೆತ ಬೀಳುತ್ತದೆ ಎಂದು ಕರ್ನಾಟಕ ರಾಜ್ಯ ರೈತ ಸಂಘದ ಅಧ್ಯಕ್ಷ ಕೆ.ಎಸ್.ಪುಟ್ಟಣ್ಣಯ್ಯ ಹೇಳಿದ್ದಾರೆ.
(ಇನ್ಫೋ ವಾರ್ತೆ )
ಮುಖಪುಟ / ಕಾವೇರಿ ಕನ್ನಡಿ
Comments
Story first published: Friday, February 7, 2003, 5:30 [IST]