ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಸಾಲದ ಶೂಲ : ಬೀದರ್‌ ಸಕ್ಕರೆ ಕಾರ್ಖಾನೆಗೆ ಬೀಗ

By Staff
|
Google Oneindia Kannada News

ಬೀದರ್‌: ಸಾಲ ಮರುಪಾವತಿ ಮಾಡದ ಕಾರಣ ಇಲ್ಲಿನ ಕಿಸಾನ್‌ ಸಹಕಾರಿ ಸಕ್ಕರೆ ಕಾರ್ಖಾನೆಯನ್ನು ಮುಟ್ಟುಗೋಲು ಹಾಕಿಕೊಳ್ಳಲಾಗಿದೆ.

ಮಾಜಿ ಸಚಿವ ಮಿರಾಜುದ್ದೀನ್‌ ಪಟೇಲ್‌ ಅವರ ಅಧ್ಯಕ್ಷತೆಯಲ್ಲಿ ಈ ಕಾರ್ಖಾನೆಯನ್ನು ಸ್ಥಾಪಿಸಲಾಗಿದೆ. ಬೀದರ್‌ ಕಿಸಾನ್‌ ಸಹಕಾರಿ ಸಕ್ಕರೆ ಕಾರ್ಖಾನೆ ಆಡಳಿತ ಮಂಡಳಿಯು ಜಿಲ್ಲಾ ಸಹಕಾರಿ ಬ್ಯಾಂಕ್‌ನಿಂದ 2000ನೇ ವರ್ಷದಲ್ಲಿ ಐದು ಕೋಟಿ ರೂಪಾಯಿ ಸಾಲ ಪಡೆದಿತ್ತು.

ಸಾಲ ಮರುಪಾವತಿಸಲು ಅನೇಕ ಬಾರಿ ಸೂಚನಾ ಪತ್ರವನ್ನು ಕಳುಹಿಸಿದರೂ ಯಾವುದೇ ಪ್ರತಿಕ್ರಿಯೆ ಬಾರದ ಕಾರಣ ಕಾರ್ಖಾನೆಯನ್ನು ಜಿಲ್ಲಾ ಸಹಕಾರಿ ಬ್ಯಾಂಕ್‌ ಮುಟ್ಟುಗೋಲು ಹಾಕಿಕೊಂಡಿದೆ.

ಮಾಜಿ ಸಚಿವ ಮಿರಾಜುದ್ದೀನ್‌ ಪಟೇಲ್‌ ಜಾತ್ಯತೀತ ಜನತಾ ದಳದಿಂದ ಹುಮ್ನಾಬಾದ್‌ ಚುನಾವಣೆಯಲ್ಲಿ ಸ್ಪರ್ಧಿಸುತ್ತಿದ್ದಾರೆ. ಕಾರ್ಖಾನೆ ಮುಟ್ಟುಗೋಲು ಹಾಕಿಕೊಂಡಿರುವುದರಿಂದ ಅವರು ಸಾರ್ವಜನಿಕರ ಹಣವನ್ನು ದುರುಪಯೋಗಪಡಿಸಿಕೊಂಡಿದ್ದಾರೆ ಎಂಬ ಸೊಲ್ಲು ಚುನಾವಣೆ ಪ್ರಚಾರ ಸಂದರ್ಭದಲ್ಲಿ ಕೇಳಿ ಬರುತ್ತಿದೆ.

(ಇನ್ಫೋ ವಾರ್ತೆ)

ಮುಖಪುಟ / ಇವತ್ತು... ಈ ಹೊತ್ತು...

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X