ರಸ್ತೆ ಅವಘಡ ; ಸಚಿವ ಡಿಕೇಶಿ ಪ್ರಾಣಾಪಾಯದಿಂದ ಪಾರು
ಬೆಂಗಳೂರು : ನಗರಾಭಿವೃದ್ಧಿ ಸಚಿವ ಡಿ.ಕೆ.ಶಿವಕುಮಾರ್ ಅವರು ಪ್ರಯಾಣಿಸುತ್ತಿದ್ದ ಕಾರು ಫೆ.24ರ ಬೆಳಗ್ಗೆ ಅಪಘಾತಕ್ಕೀಡಾಗಿದ್ದು , ಶಿವಕುಮಾರ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಅವರಿಗೆ ಸಣ್ಣಪುಟ್ಟ ಗಾಯಗಳಾಗಿವೆ.
ಬಿಜಾಪುರದ ಸಮೀಪ ಈ ಅಪಘಾತ ಸಂಭವಿಸಿದೆ. ರಸ್ತೆ ಬದಿಯ ಕಾಂಕ್ರೀಟ್ ನಿರ್ಮಾಣವೊಂದಕ್ಕೆ ಕಾರು ಢಿಕ್ಕಿ ಹೊಡೆದ ಪರಿಣಾಮ ಈ ಅಪಘಾತ ಸಂಭವಿಸಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ಸಚಿವ ಶಿವಕುಮಾರ್ ಅವರೊಂದಿಗೆ ಇತರ ಮೂವರು ಕಾಂಗ್ರೆಸ್ ಮುಖಂಡರು ಪ್ರಯಾಣಿಸುತ್ತಿದ್ದು , ಅವರಿಗೂ ಗಾಯಗಳಾಗಿವೆ. ಬಿಜಾಪುರದಲ್ಲಿನ ಖಾಸಗಿ ಆಸ್ಪತ್ರೆಯಲ್ಲಿ ಗಾಯಾಳುಗಳಿಗೆ ಚಿಕಿತ್ಸೆ ನೀಡಲಾಗಿದೆ.
ಹುಮ್ನಾಬಾದ್ ವಿಧಾನಸಭಾ ಕ್ಷೇತ್ರದಲ್ಲಿನ ಮರು ಚುನಾವಣೆ ಪ್ರಚಾರ ಪ್ರಕ್ರಿಯೆಯಲ್ಲಿ ಪಾಲ್ಗೊಂಡಿದ್ದ ಡಿ.ಕೆ.ಶಿವಕುಮಾರ್ ಸೋಮವಾರ ಬೆಳಗ್ಗೆ ನಗರಕ್ಕೆ ಹಿಂದಿರುಗುವ ಸಂದರ್ಭದಲ್ಲಿ ಈ ಅವಘಡ ಸಂಭವಿಸಿದೆ.
ಖಾಸಗಿ ಹೆಲಿಕ್ಯಾಪ್ಟರೊಂದು ಬಿಜಾಪುರಕ್ಕೆ ತೆರಳಿದ್ದು , ಶಿವಕುಮಾರ್ ಅವರನ್ನು ಬೆಂಗಳೂರಿಗೆ ಕರೆತಂದಿದೆ.
(ಪಿಟಿಐ)
ಮುಖಪುಟ / ಇವತ್ತು... ಈ ಹೊತ್ತು...












Click it and Unblock the Notifications