ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ವಿಧಾನ ಪರಿಷತ್ತಿನಲ್ಲಿ ದಿನಕರ್‌-ಕೃಷ್ಣ-ನಾಗಪ್ಪ

By Staff
|
Google Oneindia Kannada News

ಬೆಂಗಳೂರು : ನಿವೃತ್ತ ಪೊಲೀಸ್‌ ಮಹಾ ನಿರ್ದೇಶಕ ಸಿ.ದಿನಕರ್‌ ಅವರ ‘ವೀರಪ್ಪನ್ಸ್‌ ಪ್ರೆೃಜ್‌ ಕ್ಯಾಚ್‌: ರಾಜ್‌ಕುಮಾರ್‌’ ಕೃತಿಯಲ್ಲಿನ ಆರೋಪಗಳ ಕುರಿತು ಮುಖ್ಯಮಂತ್ರಿ ಎಸ್ಸೆಂ.ಕೃಷ್ಣ ಅವರ ಸರ್ಕಾರ ಕಣ್ಣು ಮುಚ್ಚಿ ಕುಳಿತಿದೆ ಎಂದು ಬಿಜೆಪಿ ನಾಯಕ ಬಿ.ಎಸ್‌.ಯಡಿಯೂರಪ್ಪ ಗುರುವಾರ ರಾಜ್ಯ ಸರ್ಕಾರವನ್ನು ತೀವ್ರ ತರಾಟೆಗೆ ತೆಗೆದುಕೊಂಡರು.

ನರಹಂತಕ ವೀರಪ್ಪನ್‌ ಸೆರೆಯಿಂದ ವರನಟ ರಾಜ್‌ಕುಮಾರ್‌ ಅವರನ್ನು ಬಿಡಿಸಿಕೊಳ್ಳಲು 20 ಕೋಟಿ ರುಪಾಯಿ ಒತ್ತೆ ಹಣ ನೀಡಲಾಗಿದೆ ಎಂದು ಪುಸ್ತಕದಲ್ಲಿ ಆಪಾದಿಸಲಾಗಿದೆ. ಆದರೆ, ಈ ಕುರಿತು ಸರ್ಕಾರ ಸ್ಪಷ್ಟ ಹೇಳಿಕೆ ನೀಡಿಲ್ಲ ಎಂದು ಯಡಿಯೂರಪ್ಪ ಹೇಳಿದರು.

ವಿಧಾನ ಪರಿಷತ್ತಿನಲ್ಲಿ ರಾಜ್ಯಪಾಲರ ಭಾಷಣಕ್ಕೆ ವಂದನೆ ಸಲ್ಲಿಸುವ ಚರ್ಚೆಯಲ್ಲಿ ಭಾಗವಹಿಸಿದ ಯಡಿಯೂರಪ್ಪ ಮಾತನಾಡುತ್ತಿದ್ದರು.

ಮಾಜಿ ಸಚಿವ ಎಚ್‌.ನಾಗಪ್ಪನವರ ಹತ್ಯೆಯ ಪ್ರಕರಣವನ್ನು ಸಿಬಿಐ ತನಿಖೆಗೆ ಒಪ್ಪಿಸುವಲ್ಲಿಯೂ ರಾಜ್ಯ ಸರ್ಕಾರ ವಿಫಲವಾಗಿದೆ. ರಾಜ್‌ ಬಿಡುಗಡೆಯ ಸಂದರ್ಭದಲ್ಲಿ ವೀರಪ್ಪನ್‌ಗೆ ನೀಡಲಾದ ಷರತ್ತುಗಳನ್ನು ಪೂರ್ಣ ಪ್ರಮಾಣದಲ್ಲಿ ನೆರವೇರಿಸದ ಕಾರಣದಿಂದಲೇ ನಾಗಪ್ಪನವರ ಅಪಹರಣ-ಹತ್ಯೆ ಸಂಭವಿಸಿದೆ ಎಂದ ಯಡಿಯೂರಪ್ಪ - ನಾಗಪ್ಪನವರ ಹತ್ಯೆಗೆ ರಾಜ್ಯ ಸರ್ಕಾರವೇ ಹೊಣೆಯೆಂದು ದೂರಿದರು.

(ಪಿಟಿಐ)

ಮುಖಪುಟ / ವೀರಪ್ಪನ್‌ ಶಿಕಾರಿ

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X