ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕೊಟ್ಟ ಮಾತನ್ನು ಗಾಳಿಗೆ ತೂರಿದ ಸರ್ಕಾರ- ಪಾಪು

By Staff
|
Google Oneindia Kannada News

ಹುಬ್ಬಳ್ಳಿ : ಹೈದ್ರಾಬಾದ್‌ ಕರ್ನಾಟಕ ಹಾಗೂ ಉತ್ತರ ಕರ್ನಾಟಕದ ಮೂಲಭೂತ ಸಮಸ್ಯೆಗಳನ್ನು ನಿವಾರಿಸುವ ಗೊಡವೆಗೇ ಹೋಗದ ಸರ್ಕಾರ, ಪ್ರಸಕ್ತ ಬಜೆಟ್ಟಿನಲ್ಲಿ ಪ್ರಾದೇಶಿಕ ಅಸಮಾನತೆ ಕುರಿತು ಕೈಗೊಂಡಿರುವ ನಿರ್ಧಾರ ಏನೇನೂ ಅಲ್ಲ- ಉತ್ತರ ಕರ್ನಾಟಕ ಅಭಿವೃದ್ಧಿ ಹೋರಾಟ ಸಮಿತಿ ಅಧ್ಯಕ್ಷ ಡಾ. ಪಾಟೀಲ ಪುಟ್ಟಪ್ಪ ಪ್ರತಿಕ್ರಿಯೆ ಇದು.

ಡಾ.ನಂಜುಂಡಪ್ಪ ವರದಿಯನ್ನು ಅನುಷ್ಠಾನಕ್ಕೆ ತರುವುದಾಗಿ ಕೊಟ್ಟಿದ್ದ ಮಾತಿಗೆ ತಪ್ಪುತ್ತಿದೆ. ಆಲಮಟ್ಟಿಯಲ್ಲಿ ಹಿಡಿದಿಟ್ಟಿರುವ ನೀರನ್ನು ಹರಿಸಲು ಹಮ್ಮಿಕೊಂಡಿರುವ ಕಾಲುವೆ ಯೋಜನೆಗಳನ್ನು ಪೂರೈಸಲು ಸಮಯದ ಚೌಕಟ್ಟನ್ನೂ ಹಾಕಿಕೊಂಡಿಲ್ಲ . ಹುಬ್ಬಳ್ಳಿ- ಧಾರವಾಡಕ್ಕೆ ಕುಡಿಯುವ ನೀರು ಎಲ್ಲಿಂದ ತರುವುದು ಎಂಬ ಬಗ್ಗೆ ಬಜೆಟ್ಟಿನಲ್ಲಿ ಏನೂ ಪ್ರಸ್ತಾಪಿಸಿಲ್ಲ ಎಂದು ಬೆಳಗಾವಿಯಲ್ಲಿ ನಡೆದ 70ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿದ್ದ ಡಾ.ಪಾಟೀಲ ಪುಟ್ಟಪ್ಪ ಅಭಿಪ್ರಾಯಪಟ್ಟರು.

ಬೆಳಗಾವಿಯಲ್ಲಿ ವಿಧಾನಮಂಡಲದ ಅಧಿವೇಶನ ನಡೆಸಬೇಕೆಂದು ಸಾಹಿತ್ಯ ಸಮ್ಮೇಳನದಲ್ಲಿ ನಿರ್ಣಯ ಕೈಗೊಳ್ಳಲಾಗಿತ್ತು. ಬಜೆಟ್ಟಿನಲ್ಲಿ ಅದರ ಪ್ರಸ್ತಾಪವೇ ಇಲ್ಲದ್ದು ಖೇದಕರ ಎದು ಪಾಪು ವಿಷಾದಿಸಿದರು.

(ಇನ್ಫೋ ವಾರ್ತೆ)

ಮುಖಪುಟ / ಇವತ್ತು... ಈ ಹೊತ್ತು...

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X