ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಬೆಂಗಳೂರಲ್ಲಿ ಜಾರ್ಜ್‌ ಬುಷ್‌ ಪ್ರತಿಕೃತಿಗೆ ನೇಣು

By Staff
|
Google Oneindia Kannada News

ಬೆಂಗಳೂರು : ಕನ್ನಡ ಚಳವಳಿ ನಾಯಕರು ಶನಿವಾರ (ಮಾ.22) ನಗರದಲ್ಲಿ ಅಮೆರಿಕ ಅಧ್ಯಕ್ಷ ಜಾರ್ಜ್‌ ಡಬ್ಲ್ಯು. ಬುಷ್‌ ಪ್ರತಿಕೃತಿಯನ್ನು ಗಲ್ಲಿಗೇರಿಸಿದರು.

ಕನ್ನಡ ಚಳವಳಿ ವಾಟಾಳ್‌ ಪಕ್ಷದ ನಾಯಕ ವಾಟಾಳ್‌ ನಾಗರಾಜ್‌ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದ ಚಳವಳಿಕಾರರು, ಅಮೆರಿಕ ನೇತೃತ್ವದ ಪಡೆ ಇರಾಕ್‌ ಮೇಲೆ ಯುದ್ಧ ನಡೆಸುತ್ತಿರುವುದನ್ನು ವಿರೋಧಿಸಿ ಘೋಷಣೆಗಳನ್ನು ಕೂಗಿದರು. ತಕ್ಷಣವೇ ಯುದ್ಧ ನಿಲ್ಲಿಸಬೇಕೆಂದು ಒತ್ತಾಯಿಸಿದರು.

ಶುಕ್ರವಾರ ನಗರದ ಕೃಷ್ಣ ರಾಜೇಂದ್ರ ಮಾರುಕಟ್ಟೆಯಲ್ಲಿ ಕೆಲವು ಮುಸ್ಲಿಮರು ನಡೆಸಿದ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದ ಕಾರಣ ವಾಟಾಳ್‌ ಮತ್ತು ಬಂಟರ ಪ್ರತಿಭಟನೆಯ ಮೇಲೆ ಪೊಲೀಸರು ತೀವ್ರ ನಿಗಾ ಇಟ್ಟಿದ್ದರು. ಪ್ರತಿಭಟನೆಯು ಶಾಂತ ರೀತಿಯಲ್ಲಿ ನಡೆದಿದ್ದು, ಯಾವುದೇ ಅಹಿತಕರ ಘಟನೆ ನಡೆದಿಲ್ಲ ಎಂದು ಪೊಲೀಸರು ಸ್ಪಷ್ಟಪಡಿಸಿದರು.

(ಪಿಟಿಐ)

ಯುದ್ಧ ಸಂಚಯ
ಮುಖಪುಟ / ಇವತ್ತು... ಈ ಹೊತ್ತು...

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X