ತ್ವರಿತ ಅಲರ್ಟ್ ಗಳಿಗಾಗಿ
For Daily Alerts
ಪುಟ್ಟರಾಜ ಗವಾಯಿಗಳಿಗೆ ರಾಷ್ಟ್ರೀಯ ಬಸವ ಪ್ರಶಸ್ತಿ
ಬೆಂಗಳೂರು: ಪ್ರಸಿದ್ಧ ಸಂಗೀತಗಾರ, ಉಭಯಗಾನ ವಿಶಾರದ ಬಿರುದು ಪಡೆದಿರುವ ಪುಟ್ಟರಾಜ ಗವಾಯಿ ಅವರು 2002ನೇ ಸಾಲಿನ ರಾಷ್ಟ್ರೀಯ ಬಸವ ಪುರಸ್ಕಾರಕ್ಕೆ ಆಯ್ಕೆಯಾಗಿದ್ದಾರೆ.
ಮೇ ನಾಲ್ಕರಂದು ನಡೆಯುವ ಬಸವ ಜಯಂತಿ ಸಮಾರಂಭದಲ್ಲಿ ಪುಟ್ಟರಾಜ ಗವಾಯಿಗಳಿಗೆ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ನಿರ್ದೇಶಕ ಸಿ. ಸೋಮಶೇಖರ್ ತಿಳಿಸಿದ್ದಾರೆ. ರವೀಂದ್ರಕಲಾ ಕ್ಷೇತ್ರದಲ್ಲಿ ನಡೆಯುವ ಬಸವ ಜಯಂತಿ ಸಮಾರಂಭದಲ್ಲಿ ಮುಖ್ಯಮಂತ್ರಿ ಎಸ್. ಎಂ. ಕೃಷ್ಣ ಬಸವ ಪುರಸ್ಕಾರವನ್ನು ಪ್ರದಾನ ಮಾಡುವರು.
ಹಾವೇರಿ ತಾಲ್ಲೂಕಿನಲ್ಲಿ ಹುಟ್ಟಿದ ಪುಟ್ಟರಾಜ ಗವಾಯಿ ಬಾಲ್ಯದಲ್ಲಿಯೇ ದೃಷ್ಟಿ ಕಳೆದುಕೊಂಡರೂ, ಆತ್ಮವಿಶ್ವಾಸದಿಂದ ಸಂಗೀತ ಕ್ಷೇತ್ರದಲ್ಲಿ ಸಾಧನೆ ಮಾಡಿದವರು. ಕನ್ನಡ, ಹಿಂದಿ ಮತ್ತು ಸಂಸ್ಕೃತ ಭಾಷೆಗಳಲ್ಲಿ ಪಾಂಡಿತ್ಯ ಗಳಿಸಿ ಸುಮಾರು 60 ವಿಶಿಷ್ಟ ಕೃತಿಗಳನ್ನು ರಚಿಸಿ ಸಾಹಿತ್ಯ ಕ್ಷೇತ್ರದಲ್ಲಿಯೂ ಗುರುತಿಸಿಕೊಂಡಿದ್ದಾರೆ.
(ಇನ್ಫೋ ವಾರ್ತೆ)
ಮುಖಪುಟ / ಇವತ್ತು... ಈ ಹೊತ್ತು...
Comments
Story first published: Friday, May 2, 2003, 5:30 [IST]