ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಚನ್ನರಾಯಪಟ್ಟಣದಲ್ಲಿ ನಿವೃತ್ತ ನೌಕರರ ಸಮಾವೇಶ

By Staff
|
Google Oneindia Kannada News

ಬೆಂಗಳೂರು : ಕರ್ನಾಟಕ ರಾಜ್ಯ ನಿವೃತ್ತ ನೌಕರರರ ಹಾಗೂ ಹಿರಿಯ ನಾಗರಿಕರ ಸಮಾವೇಶ ಜೂನ್‌ 4ರ ಬುಧವಾರ ಚನ್ನರಾಯಪಟ್ಟಣದಲ್ಲಿ ನಡೆಯಲಿದೆ.

ಚನ್ನರಾಯಪಟ್ಟಣದ ಸರ್ಕಾರಿ ಪ್ರಾಥಮಿಕ ಶಾಲೆಯ ಮೈದಾನದಲ್ಲಿ ನಡೆಯುವ ಸಮಾವೇಶವನ್ನು ಕಂದಾಯ ಸಚಿವ ಎಚ್‌.ಸಿ.ಶ್ರೀಕಂಠಯ್ಯ ಉದ್ಘಾಟಿಸುವರು. ಆದಿಚುಂಚನಗಿರಿಯ ಶ್ರೀ ಬಾಲಗಂಗಾಧರನಾಥ ಸ್ವಾಮೀಜಿ ಸಾನ್ನಿಧ್ಯದಲ್ಲಿ ಸಮ್ಮೇಳನ ನಡೆಯಲಿದೆ ಎಂದು ನಿವೃತ್ತ ನೌಕರರ ಸಂಘದ ಅಧ್ಯಕ್ಷ ಡಿ.ಎನ್‌.ಸಂಪತ್‌ ತಿಳಿಸಿದ್ದಾರೆ.

ಸಮಾವೇಶದ ಪ್ರಮುಖ ಉದ್ದೇಶಗಳು :

  • ಹಿರಿಯ ನಾಗರಿಕರ ವೈದ್ಯಕೀಯ ವೆಚ್ಚವನ್ನು ಸರ್ಕಾರ ಭರಿಸಬೇಕು.
  • ಬಸ್ಸುಗಳಲ್ಲಿ ರಿಯಾಯಿತಿ ನೀಡಬೇಕು.
  • ನಿವೃತ್ತರ ಕಲ್ಯಾಣಕ್ಕಾಗಿ ಸರ್ಕಾರ ನಿಧಿ ಸ್ಥಾಪಿಸಬೇಕು.
  • ಶಾಸನಸಭೆಗಳಲ್ಲಿ ನಿವೃತ್ತರಿಗೆ ಪ್ರಾತಿನಿಧ್ಯ ನೀಡಬೇಕು.
  • ಸರ್ಕಾರದ ಸಮಿತಿ, ಮಂಡಳಿಗಳಲ್ಲಿ ನಿವೃತ್ತರಿಗೆ ಅನುಭವದ ಆಧಾರದ ಮೇಲೆ ಪ್ರಾತಿನಿಧ್ಯ ನೀಡಬೇಕು.
(ಇನ್ಫೋ ವಾರ್ತೆ)

ಮುಖಪುಟ / ಇವತ್ತು... ಈ ಹೊತ್ತು...

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X