ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಜೂನ್‌ 11ರಂದು ರಾಜ್ಯಾದ್ಯಂತ ವ್ಯಾಪಾರ ವಹಿವಾಟು ಬಂದ್‌

By Staff
|
Google Oneindia Kannada News

ಜೂನ್‌ 11ರಂದು ರಾಜ್ಯಾದ್ಯಂತ ವ್ಯಾಪಾರ ವಹಿವಾಟು ಬಂದ್‌
ಕರ್ನಾಟಕ ಮಾರಾಟ ತೆರಿಗೆ ಕಾಯ್ದೆ ಬದಲಾವಣೆಗೆ ತೀವ್ರ ವಿರೋಧ

ಬೆಂಗಳೂರು : ಜೂನ್‌ 11ರ ಬುಧವಾರ ರಾಜ್ಯಾದ್ಯಂತ ಒಂದು ದಿನ ವ್ಯಾಪಾರ ವಹಿವಾಟು ಬಂದ್‌ಗೆ ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆ (ಎಫ್‌ಕೆಸಿಸಿಐ) ಹಾಗೂ ಅದರ ಸಂಯೋಜಿತ ಸಂಸ್ಥೆಗಳು ಕರೆ ನೀಡಿವೆ.

ಕರ್ನಾಟಕ ಮಾರಾಟ ತೆರಿಗೆ ಕಾಯ್ದೆಯಡಿಯಲ್ಲಿ ಜಾರಿಗೊಳಿಸಿರುವ ಬದಲಾವಣೆಯನ್ನು ವಿರೋಧಿಸಿ ಈ ಬಂದ್‌ಗೆ ಕರೆ ನೀಡಲಾಗಿದೆ. ಜೂನ್‌ 11 ರಂದು ರಾಜ್ಯಾದ್ಯಂತ ವ್ಯಾಪಾರ ವಹಿವಾಟು ಸ್ಥಗಿತಗೊಳಿಸಲಾಗುವುದು ಎಂದು ಎಫ್‌ಕೆಸಿಸಿಐ ಅಧ್ಯಕ್ಷ ಕೆ.ಎನ್‌. ಜಯಲಿಂಗಪ್ಪ ತಿಳಿಸಿದ್ದಾರೆ.

ಜೂನ್‌ ತಿಂಗಳ ತೆರಿಗೆ ಪಾವತಿಯನ್ನು ಕೂಡ ಸ್ಥಗಿತಗೊಳಿಸಲಾಗುವುದು. ಕರ್ನಾಟಕ ಮಾರಾಟ ತೆರಿಗೆ ಕಾಯ್ದೆಗೆ ತಿದ್ದುಪಡಿ ತಂದಿರುವ ಸರ್ಕಾರದ ಆದೇಶ ಏಕಪಕ್ಷೀಯವಾಗಿದೆ ಈ ತಿದ್ದುಪಡಿ ಆದೇಶವನ್ನು ಸರ್ಕಾರ ತಕ್ಷಣದಿಂದಲೇ ವಾಪಸ್ಸು ಪಡೆಯಬೇಕು ಎಂದು ಜಯಲಿಂಗಪ್ಪ ಒತ್ತಾಯಿಸಿದ್ದಾರೆ.

(ಇನ್ಫೋ ವಾರ್ತೆ)

ಮುಖಪುಟ / ವಾರ್ತೆಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X