ವಿಜಯ ಸಂಕೇಶ್ವರರ ‘ಕನ್ನಡ ನಾಡು’ ಪ್ರಾದೇಶಿಕ ಪಕ್ಷ ಅಸ್ತಿತ್ವಕ್ಕೆ
ಹುಬ್ಬಳ್ಳಿ : ಬಿಜೆಪಿಯ ಸದಸ್ಯತ್ವ ಹಾಗೂ ಲೋಕಸಭಾ ಸದಸ್ಯತ್ವ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿರುವ ವಿಆರ್ಎಲ್ ಸಮೂಹದ ಮುಖ್ಯಸ್ಥ ವಿಜಯ ಸಂಕೇಶ್ವರ ಅವರ ನೇತೃತ್ವದ 'ಕನ್ನಡ ನಾಡು" ಪ್ರಾದೇಶಿಕ ಪಕ್ಷ ಗುರುವಾರ ಪ್ರಾರಂಭವಾಯಿತು.
ಪಕ್ಷದ ಸಂವಿಧಾನ ಸಿದ್ಧವಾಗಿದೆ. ಪ್ರಾರಂಭಿಕ ಹಂತದಲ್ಲಿ 300 ಮಂದಿ 'ಕನ್ನಡ ನಾಡು" ಪಕ್ಷದ ಸದಸ್ಯತ್ವ ಪಡೆದಿದ್ದಾರೆ ಎಂದು ವಿಜಯ ಸಂಕೇಶ್ವರ ಹಾಗೂ ರತ್ನಪಾಲಶೆಟ್ಟಿ ಗುರುವಾರ (ಜೂನ್ 19) ಹುಬ್ಬಳ್ಳಿಯಲ್ಲಿ ನಡೆದ ಜಂಟಿ ಮಾಧ್ಯಮಗೋಷ್ಠಿಯಲ್ಲಿ ಪ್ರಕಟಿಸಿದರು.
ತಮ್ಮ ಸಂಸತ್ ಸದಸ್ಯ ಸ್ಥಾನಕ್ಕೆ ನೀಡಿರುವ ರಾಜೀನಾಮೆ ಇನ್ನೂ ಅಂಗೀಕಾರವಾಗಿಲ್ಲ . ಈ ರಾಜೀನಾಮೆ ಅಂಗೀಕಾರವಾದ ನಂತರ ತಾವು 'ಕನ್ನಡ ನಾಡು" ಪಕ್ಷದ ಸದಸ್ಯತ್ವ ಪಡೆಯುವುದಾಗಿ ಸಂಕೇಶ್ವರ ತಿಳಿಸಿದರು. ಪ್ರಸ್ತುತ ರತ್ನಪಾಲ ಶೆಟ್ಟಿ ಅವರು 'ಕನ್ನಡ ನಾಡು" ಪಕ್ಷದ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸುವರು.
ಜುಲೈನಿಂದ ರಾಜ್ಯಾದ್ಯಂತ ಪ್ರವಾಸ : ರಾಜೀನಾಮೆ ಅಂಗೀಕಾರವಾಗಿ 'ಕನ್ನಡ ನಾಡು" ಪಕ್ಷದ ಸದಸ್ಯತ್ವ ಪಡೆದ ನಂತರ ರಾಜ್ಯಾದ್ಯಂತ ಪ್ರವಾಸ ನಡೆಸಿ ಪಕ್ಷವನ್ನು ಸಂಘಟಿಸುವುದಾಗಿ ಹೇಳಿದ ಸಂಕೇಶ್ವರ- ನೂತನ ಪಕ್ಷ ಯಾವುದೇ ಪಕ್ಷಕ್ಕೆ ಸವಾಲೆಸೆಯಲು ಕಟ್ಟಿದ್ದಲ್ಲ ಎಂದು ಸ್ಪಷ್ಟಪಡಿಸಿದರು.
'ಕನ್ನಡ ನಾಡು" ಪಕ್ಷಕ್ಕೆ ವಿವಿಧ ರೈತ ಸಂಘಟನೆಗಳು, ಮಠಾಧೀಶರು, ಸಾಹಿತಿಗಳು, ಚಿಂತಕರು, ಕನ್ನಡ ಚಳವಳಿಕಾರರು ಬೆಂಬಲ ಸೂಚಿಸಿದ್ದಾರೆ. ರೈತರ ಹಾಗೂ ಜನಸಾಮಾನ್ಯರ ಹಿತಾಸಕ್ತಿಗಾಗಿ 'ಕನ್ನಡ ನಾಡು" ಪಕ್ಷ ದುಡಿಯಲಿದೆ ಎಂದು ವಿಜಯ ಸಂಕೇಶ್ವರ ಹೇಳಿದರು.
-
Jobs: ಹೈಕೋರ್ಟ್ನಲ್ಲಿ ಕೆಲಸ ಬೇಕೆ? 70 ಅಸಿಸ್ಟೆಂಟ್ ಕೋರ್ಟ್ ಸೆಕ್ರೆಟರಿ ಹುದ್ದೆಗಳಿಗೆ ಅರ್ಜಿ ಆಹ್ವಾನ, ಇಂದೇ ಅರ್ಜಿ ಸಲ್ಲಿಸಿ -
ಇಂಧನ ಪೂರೈಕೆ ಕೊರತೆ ಭೀತಿ: 2026ರಲ್ಲಿ ನೀವು ಖರೀದಿಸಬಹುದಾದ ಟಾಪ್ ಎಲೆಕ್ಟ್ರಿಕ್ ಸ್ಕೂಟರ್ ಗಳು ಇಲ್ಲಿವೆ -
Annamalai: ಅಣ್ಣಾಮಲೈ ಮತ್ತು ರಾಜಕೀಯ ಉನ್ಮಾದ: ಶಿವಕುಮಾರ್ ಮೆಣಸಿನಕಾಯಿ ಬರಹ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
ಸಿದ್ದರಾಮಯ್ಯ ವಿರುದ್ಧ ಆರ್. ಅಶೋಕ್ ತೀವ್ರ ವಾಗ್ದಾಳಿ: ರಾಜಕೀಯದಲ್ಲಿ ಹೊಸ ವಿವಾದ -
By Election: ಒಬ್ಬರಿಂದ ಪಕ್ಷ ಗೆಲ್ಲಲ್ಲ, ಇದು ಕಾಂಗ್ರೆಸ್ ಸಿದ್ಧಾಂತಕ್ಕೆ ಸಿಗುವ ಜಯ: ಸಲೀಂ ಅಹ್ಮದ್ ಟಾಂಗ್ ಕೊಟ್ಟಿದ್ಯಾರಿಗೆ? -
GST: ಕಾಂಗ್ರೆಸ್ ಜನರ ಪರವೋ ಅಥವಾ ಹೆಚ್ಚಿನ ತೆರಿಗೆ ದರದ ಪರವೋ? ಮಾಜಿ ಸಿಎಂ ನೇರ ಪ್ರಶ್ನೆ -
ಗ್ಯಾರಂಟಿ ಯೋಜನೆಗಳು ಕಾಂಗ್ರೆಸ್ ಕೈ ಹಿಡಿಯುತ್ತವೆ: ಸಿದ್ದರಾಮಯ್ಯ ಹೇಳಿಕೆ -
Raghav Chadha: ಸಂಸದ ರಾಘವ್ ಚಡ್ಡಾಗೆ ಶಾಕ್ ಕೊಟ್ಟ ಎಎಪಿ, ಬಿಜೆಪಿ ಸೇರಲಿದ್ದಾರೆಯೇ ಸ್ಟಾರ್ ರಾಜಕಾರಣಿ -
Water4Life: ಅತ್ಯಮೂಲ್ಯ ಜಲಮೂಲಗಳ ಸಂರಕ್ಷಣೆಗೆ ರಿಲಯನ್ಸ್ ಫೌಂಡೇಷನ್ನಿಂದ ಜನ ಚಳವಳಿ, ಡಿಟೇಲ್ಸ್ ಇಲ್ಲಿದೆ -
ಮುಂದಿನ 2 ರಿಂದ 3 ವಾರಗಳಲ್ಲಿ ಇರಾನ್ ಮೇಲೆ ಅತ್ಯಂತ ಭೀಕರ ದಾಳಿ: ಟ್ರಂಪ್ ಎಚ್ಚರಿಕೆ -
ತಮಿಳುನಾಡಿನಲ್ಲಿ ರಂಗೇರಿದ ಅಖಾಡ: ಹೊಸ ಶಕ್ತಿಯಾಗಿ ವಿಜಯ್ ಪ್ರವೇಶ, ಪ್ರಮುಖ ಪಕ್ಷಗಳು, ಚರ್ಚೆಯ ವಿಷಯಗಳು










Click it and Unblock the Notifications