ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಉ.ಕ. ಸಾಂಸ್ಕೃತಿಕ ರಾಜಧಾನಿ ಧಾರವಾಡದಿ ರಂಗಾಯಣ ಅಂಗಸಂಸ್ಥೆ

By Staff
|
Google Oneindia Kannada News

ಉ.ಕ. ಸಾಂಸ್ಕೃತಿಕ ರಾಜಧಾನಿ ಧಾರವಾಡದಿ ರಂಗಾಯಣ ಅಂಗಸಂಸ್ಥೆ
ಸಾಂಸ್ಕೃತಿಕ ಚಟುವಟಿಕೆಗಳ ಉತ್ತರ ಕರ್ನಾಟಕದಲ್ಲಿ ಅಭಿವೃದ್ಧಿಪಡಿಸಲು ಸಂಸ್ಕೃತಿ ಇಲಾಖೆ ಆಸಕ್ತಿ

ಬೆಂಗಳೂರು : ಉತ್ತರ ಕರ್ನಾಟಕ ಪ್ರದೇಶದಲ್ಲಿ ಸಾಂಸ್ಕೃತಿಕ ಮತ್ತು ರಂಗಭೂಮಿ ಚಟುವಟಿಕೆಗಳನ್ನು ಚುರುಕುಗೊಳಿಸುವ ಉದ್ದೇಶದಿಂದ ಧಾರವಾಡದಲ್ಲಿ ತನ್ನ ಅಂಗಸಂಸ್ಥೆಯನ್ನು ಆರಂಭಿಸಲು ರಂಗಾಯಣ ಮುಂದಾಗಿದೆ.

ಧಾರವಾಡ ಉತ್ತರ ಕರ್ನಾಟಕದ ಸಾಂಸ್ಕೃತಿಕ ರಾಜಧಾನಿಯಾಗಿರುವುದರಿಂದ ಹಾಗೂ ಈ ಮುನ್ನ ಅನೇಕ ಸಾಂಸ್ಕೃತಿಕ ಸಂಘಟನೆಗಳು ಧಾರವಾಡ ಜಿಲ್ಲೆಯಲ್ಲಿದ್ದು ಈಗ ಕಣ್ಮರೆಯಾಗಿರುವ ಹಿನ್ನೆಲೆಯಲ್ಲಿ ರಂಗಾಯಣದ ಕಾರ್ಯಚಟುವಟಿಕೆಗಳಿಗೆ ಧಾರವಾಡ ಸೂಕ್ತ ಪ್ರದೇಶವೆಂದು ಗುರುತಿಸಲಾಗಿದೆ. ಅಲ್ಲಿ ರಂಗಾಯಣದ ಅಂಗಸಂಸ್ಥೆಯನ್ನು ತೆರೆಯಲಾಗುವುದು ಎಂದು ಕನ್ನಡ ಮತ್ತು ಸಂಸ್ಕೃತಿ ಖಾತೆ ಸಚಿವೆ ರಾಣಿ ಸತೀಶ್‌ ತಿಳಿಸಿದರು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಯೋಜನೆಗಳನ್ನು ಇತರ ಪ್ರದೇಶಗಳಿಗೂ ತಲುಪಿಸುವ ನಿಟ್ಟಿನಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ಇದರಿಂದ ಉತ್ತರ ಕರ್ನಾಟಕದ ಅಭಿವೃದ್ಧಿಯಲ್ಲಿರುವ ಅಸಮತೋಲನ ತುಸು ನಿವಾರಣೆಯಾಗಬಹುದು ಎಂಬ ಆಶಾ ಭಾವನೆಯನ್ನು ಸಚಿವೆ ಸುದ್ದಿಗೋಷ್ಠಿಯಲ್ಲಿ ವ್ಯಕ್ತಪಡಿಸಿದರು.

(ಇನ್ಫೋ ವಾರ್ತೆ)

ಮುಖಪುಟ / ವಾರ್ತೆಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X