ರಾಜ್ಯದಲ್ಲಿ ಡೆಂಗ್ಯೂ : 192 ಮಂದಿಗೆ ಸೋಂಕು, ಇಬ್ಬರ ಸಾವು
ರಾಜ್ಯದಲ್ಲಿ ಡೆಂಗ್ಯೂ : 192 ಮಂದಿಗೆ ಸೋಂಕು, ಇಬ್ಬರ ಸಾವು
ಸೊಳ್ಳೆಗಳ ನಾಶಕ್ಕೆ ವ್ಯಾಪಕ ಕ್ರಮ, ತಾತ್ಕಾಲಿಕ ಆರೋಗ್ಯ ಕೇಂದ್ರಗಳ ಸಾವು
ಡೆಂಗ್ಯೂ ಜ್ವರದ ತಡೆಗಟ್ಟುವಿಕೆ ಹಾಗೂ ಚಿಕಿತ್ಸೆಯ ಬಗ್ಗೆ ರಾಜ್ಯ ಸರ್ಕಾರ ವ್ಯಾಪಕ ಕ್ರಮಗಳನ್ನು ಕೈಗೊಂಡಿದೆ. ಈವರೆಗೆ ರಾಜ್ಯದಲ್ಲಿ ಇಬ್ಬರು ಡೆಂಗ್ಯೂ ಜ್ವರಕ್ಕೆ ಬಲಿಯಾಗಿದ್ದಾರೆ ಎಂದು ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಸಚಿವ ಕಾಗೋಡು ತಿಮ್ಮಪ್ಪ ಸೋಮವಾರ ವಿಧಾನ ಪರಿಷತ್ತಿನಲ್ಲಿ ತಿಳಿಸಿದರು. ಕಾಂಗ್ರೆಸ್ಸಿನ ಕೆ.ಸಿ.ಕೊಂಡಯ್ಯ ಅವರ ಪ್ರಶ್ನೆಗೆ ಕಾಗೋಡು ತಿಮ್ಮಪ್ಪ ಪ್ರತಿಕ್ರಿಯಿಸುತ್ತಿದ್ದರು.
ರಕ್ತ ಸ್ಯಾಂಪಲ್ಗಳ ಪರೀಕ್ಷೆಗೆ ಸರ್ಕಾರ ಎಲ್ಲ ಕ್ರಮಗಳನ್ನು ಕೈಗೊಂಡಿದೆ. ತಾತ್ಕಾಲಿಕ ಆರೋಗ್ಯ ಕೇಂದ್ರಗಳನ್ನು ಅವಶ್ಯವಿರುವೆಡೆ ಪ್ರಾರಂಭಿಸಲಾಗಿದೆ. ಸೊಳ್ಳೆಗಳ ನಾಶಕ್ಕೆ ವ್ಯಾಪಕ ಕ್ರಮ ಕೈಗೊಂಡಿದ್ದು - ಕ್ರಿಮಿನಾಶಕಗಳನ್ನು ಸಿಂಪರಿಸಲಾಗುತ್ತಿದೆ ಎಂದು ಸಚಿವ ತಿಮ್ಮಪ್ಪ ತಿಳಿಸಿದರು.
(ಪಿಟಿಐ)
ಮುಖಪುಟ / ವಾರ್ತೆಗಳು












Click it and Unblock the Notifications