ಕುರ್ತಕೋಟಿಗೆ ಪ್ರಾಧಿಕಾರದಿಂದ ವಂಚನೆ
ಕುರ್ತಕೋಟಿಗೆ ಪ್ರಾಧಿಕಾರದಿಂದ ವಂಚನೆ
ಮಲ್ಲೇಪುರಂಗೆ 45 ಸಾವಿರ ಗೌರವಧನ, ಕೀರ್ತಿನಾಥರಿಗೆ ಪಂಗನಾಮ !
ಖ್ಯಾತ ಸಂಶೋಧಕ ಶಂಬಾ ಜೋಷಿ ಅವರ ‘ಮರಾಠಿ ಸಂಸ್ಕೃತಿ ಕೆಲವು ಸಮಸ್ಯೆಗಳು’ ಕೃತಿಯನ್ನು ಕುರ್ತಕೋಟಿ ಅವರು ಅನುವಾದಿಸಿದ್ದು , ಈ ಅನುವಾದಿತ ಕೃತಿಯನ್ನು ಪುಸ್ತಕ ಪ್ರಾಧಿಕಾರ ಪ್ರಕಟಿಸಿದೆ. ಆದರೆ ಈ ಸಂಬಂಧ ಯಾವುದೇ ರಾಯಧನವನ್ನು ಕುರ್ತಕೋಟಿಯವರಿಗೆ ನೀಡಿಲ್ಲ ಎಂದು ಗ್ರಂಥಮಾಲೆಯ ರಮಾಕಾಂತ ಜೋಷಿ ಸುದ್ದಿ ಪ್ರಕಟಣೆಯಲ್ಲಿ ದೂರಿದ್ದಾರೆ.
ಹಣ ಕೊಡದ ಬಗ್ಗೆ ಕಾನೂನು ಕ್ರಮ ಕೈಗೊಳ್ಳಲು ಕುರ್ತಕೋಟಿ ಯೋಚಿಸಿದ್ದರು. ಈ ಸಂದರ್ಭದಲ್ಲಿ ಮಧ್ಯ ಪ್ರವೇಶಿಸಿದ ಯು.ಆರ್.ಅನಂತಮೂರ್ತಿ ಹಾಗೂ ಕೆ.ವಿ.ಸುಬ್ಬಣ್ಣ ಅವರು- ರಾಯಧನ ನೀಡುವಂತೆ ಪುಸ್ತಕ ಪ್ರಾಧಿಕಾರದ ಅಧ್ಯಕ್ಷ ಮಲ್ಲೇಪುರಂ ಜಿ.ವೆಂಕಟೇಶ್ ಅವರಿಗೆ ಸೂಚಿಸಿದ್ದರು. ಕುರ್ತಕೋಟಿ ಕೇಳಿದ್ದ 10 ಸಾವಿರ ರುಪಾಯಿ ಗೌರವಧನ ನೀಡಲು ಮಲ್ಲೇಪುರಂ ಕೂಡ ಒಪ್ಪಿಕೊಂಡಿದ್ದರು. ಆದರೆ ಹಣ ಮಾತ್ರ ಬರಲಿಲ್ಲ .
ಶಂಬಾ ಅವರ ಸಮಗ್ರ ಸಾಹಿತ್ಯ ಸಂಪುಟಗಳನ್ನು ಪ್ರಾಧಿಕಾರ ಪ್ರಕಟಿಸಿದೆ. ಈ ಆರು ಸಂಪುಟಗಳ ಸಂಪಾದಕತ್ವವನ್ನು ಪ್ರಾಧಿಕಾರದ ಅಧ್ಯಕ್ಷ ಮಲ್ಲೇಪುರಂ ಜಿ.ವೆಂಕಟೇಶ್ ಅವರೇ ನಿರ್ವಹಿಸಿದ್ದು , ತಮ್ಮ ಕಾರ್ಯಕ್ಕಾಗಿ 45 ಸಾವಿರ ರುಪಾಯಿ ಗೌರವ ಧನ ಪಡೆದಿದ್ದಾರೆ. ಆದರೆ, ಕುರ್ತಕೋಟಿಯವರಿಗೆ ಚಿಕ್ಕಾಸೂ ದೊರೆತಿಲ್ಲ ಎಂದು ರಮಾಕಾಂತ ಜೋಷಿ ವಿಷಾದಿಸಿದ್ದಾರೆ.
ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರು ಹಾಗೂ ಇಲಾಖೆಯ ನಿರ್ದೇಶಕರು ಇನ್ನು ಮುಂದಾದರೂ ಗೌರವಧನವನ್ನು ಕುರ್ತಕೋಟಿಯವರ ಕುಟುಂಬ ವರ್ಗಕ್ಕೆ ತಲುಪಿಸಲು ಕ್ರಮ ಕೈಗೊಳ್ಳಬೇಕು ಎಂದು ಮನೋಹರ ಗ್ರಂಥಮಾಲೆಯ ರಮಾಕಾಂತ ಜೋಷಿ ಒತ್ತಾಯಿಸಿದ್ದಾರೆ.
(ಇನ್ಫೋ ವಾರ್ತೆ)
ಪೂರಕ ಓದಿಗೆ-
ಕುರ್ತಕೋಟಿ ವಿಮರ್ಶೆಯ ಮಾದರಿ ಹೀಗಿತ್ತು ...
ಹರಿ ಮನೆಯಲ್ಲಿ ಕೀರ್ತಿನಾಥರ ಸ್ಮರಣೆ
ಮುಖಪುಟ / ವಾರ್ತೆಗಳು
-
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
Bengaluru: ಪಬ್ನಲ್ಲಿ 150 ರೂ. ಕೊಟ್ಟು ಆರ್ಡರ್ ಮಾಡಿದ್ರೆ ಬಂದಿದ್ದು ಬರೀ ಹಪ್ಪಳ-ಸಂಡಿಗೆ: ದಂಗಾದ ಗ್ರಾಹಕ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ












Click it and Unblock the Notifications