ಕೂಡಿಬಂದ ಮುಹೂರ್ತ, ಆ.18ರಿಂದ ಮೋಡ ಬಿತ್ತನೆ ಆರಂಭ
ಕೂಡಿಬಂದ ಮುಹೂರ್ತ, ಆ.18ರಿಂದ ಮೋಡ ಬಿತ್ತನೆ ಆರಂಭ
ಮೋಡಗಳನ್ನು ಬಿತ್ತಿ , ಮಳೆ ಬೆಳೆಯಬಲ್ಲೆವಾ ?
90 ದಿನಗಳ ಅವಧಿಯ ಈ ಮೋಡ ಬಿತ್ತನೆ ಯೋಜನೆಯಿಂದಾಗಿ ರಾಜ್ಯದಲ್ಲಿ ಕೃತಕ ಮಳೆ ತರಿಸಲಾಗುವುದು. ರಾಜ್ಯದಲ್ಲಿ ಮಳೆಯಾಗದೇ ಇರುವ ಎಲ್ಲ ಜಲಾಶಯ ಪ್ರದೇಶಗಳಲ್ಲಿ ಮೋಡ ಬಿತ್ತನೆ ಮಾಡಲಾಗುವುದು ಎಂದು ಜಲಸಂಪನ್ಮೂಲ ಸಚಿವ ಎಚ್. ಕೆ. ಪಾಟೀಲ್ ಸೋಮವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು.
5. 65 ಕೋಟಿ ರೂಪಾಯಿ ವೆಚ್ಚದ ಈ ಮೋಡ ಬಿತ್ತನೆ ಯೋಜನೆಯನ್ನು ಅಮೆರಿಕಾ ಮೂಲದ ಹವಾಮಾನ ಅಭಿವೃದ್ಧಿ ಸಂಸ್ಥೆಯಾಂದಕ್ಕೆ ರಾಜ್ಯ ಸರಕಾರ ಗುತ್ತಿಗೆ ನೀಡಿದೆ. ಈ ಯೋಜನೆಗೆ ಬೇಕಾದ ವೈಮಾನಿಕ ವಾಹನಗಳು ಆ. 11ರ ಸಂಜೆ ರಾಜ್ಯಕ್ಕೆ ಆಗಮಿಸಲಿವೆ ಎಂದು ಪಾಟೀಲ್ ತಿಳಿಸಿದರು.
ರಕ್ಷಣಾ ಸಚಿವಾಲಯ, ಕೇಂದ್ರೀಯ ನಾಗರಿಕ ವಿಮಾನಯಾನ ಸಚಿವಾಲಯ ಮತ್ತು ಗೃಹ ಸಚಿವಾಲಯ ಈ ಮೋಡ ಬಿತ್ತನೆ ಯೋಜನೆಗೆ ಒಪ್ಪಿಗೆ ನೀಡಿದೆ. ಹವಾಮಾನ ಅಭಿವೃದ್ಧಿ ಸಂಸ್ಥೆಯು ರಾಡಾರ್ ಮೂಲಕ ಮೋಡ ಬಿತ್ತನೆ ಮಾಡಬೇಕಾದ ಜಾಗವನ್ನು ಗುರುತಿಸಲಿದೆ. 20 ನಿಮಿಷಗಳ ಅವಧಿಯಲ್ಲಿ ಈ ಮೋಡ ಬಿತ್ತನೆಯ ಜಾಗಗಳನ್ನು ಗುರುತಿಸಲಾಗುವುದು ಎಂದ ಪಾಟೀಲ್- ರಾಜ್ಯದಲ್ಲಿ 1139 ಮಿಮೀ ಮಳೆಯಾಗಬೇಕಿತ್ತು. ಆದರೆ 2002ನೇ ಇಸವಿಯಲ್ಲಿ ಶೇ.29ರಷ್ಟು ಮಳೆಯ ಪ್ರಮಾಣ ಕಡಿಮೆಯಾಗಿರುವುದಾಗಿ ಹೇಳಿದರು.
ಯೋಜನೆಯನ್ನು ಕೈಗೆತ್ತಿಕೊಂಡಿರುವ ಹವಾಮಾನ ಅಭಿವೃದ್ಧಿ ಸಂಸ್ಥೆಯು ಮೋಡ ಬಿತ್ತನೆಯಿಂದಾಗಿ ಕನಿಷ್ಠ ಶೇ.15ರಿಂದ ಶೇ 20ರಷ್ಟಾದರೂ ಮಳೆಯಾಗಲಿದೆ ಎಂದು ಭರವಸೆ ನೀಡಿದೆ. ಇಷ್ಟು ದೊಡ್ಡ ಪ್ರಮಾಣದಲ್ಲಿ ಕರ್ನಾಟಕ ಸರಕಾರವು ಮೋಡ ಬಿತ್ತನೆ ಯೋಜನೆಯನ್ನು ಕೈಗೆತ್ತಿಕೊಂಡಿರುವುದು ಇದೇ ಪ್ರಥಮ.
(ಪಿಟಿಐ)
ಮುಖಪುಟ / ವಾರ್ತೆಗಳು
-
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
Bengaluru: ಪಬ್ನಲ್ಲಿ 150 ರೂ. ಕೊಟ್ಟು ಆರ್ಡರ್ ಮಾಡಿದ್ರೆ ಬಂದಿದ್ದು ಬರೀ ಹಪ್ಪಳ-ಸಂಡಿಗೆ: ದಂಗಾದ ಗ್ರಾಹಕ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ












Click it and Unblock the Notifications