Get Updates
Get notified of breaking news, exclusive insights, and must-see stories!

ಕನ್ನಡ ಸಂಸ್ಕೃತಿ ಇಲಾಖೆಯಿಂದ ಮರೆಯಲಾಗದ ಮಹಾನುಭಾವರು

ಕನ್ನಡ ಸಂಸ್ಕೃತಿ ಇಲಾಖೆಯಿಂದ ಮರೆಯಲಾಗದ ಮಹಾನುಭಾವರು
ಸೆಪ್ಟಂಬರ್‌ ತಿಂಗಳ ಮನೆಯಂಗಳದ ಮಾತುಕತೆಯಲ್ಲಿ ಭೈರಪ್ಪ

ಬೆಂಗಳೂರು: ಪ್ರತಿ ತಿಂಗಳ ಮಹತ್ವಾಕಾಂಕ್ಷೆಯ ಕಾರ್ಯಕ್ರಮ ಮನೆಯಂಗಳದಲ್ಲಿ ಮಾತುಕತೆಯ ಅಪಾರ ಯಶಸ್ಸಿನಿಂದ ಉತ್ತೇಜಿತವಾಗಿರುವ ಕನ್ನಡ ಮತ್ತು ಸಂಸ್ಕೃತಿ ನಿರ್ದೇಶನಾಲಯ, ಮುಂದಿನ ತಿಂಗಳಿನಿಂದ ‘ಮರೆಯಲಾಗದ ಮಹನೀಯರು’ ಎಂಬ ಹೊಸ ಕಾರ್ಯಕ್ರಮವನ್ನು ಆರಂಭಿಸಲಿದೆ.

ಸಾಹಿತ್ಯ- ಸಂಸ್ಕೃತಿ ಮತ್ತಿತರ ಕ್ಷೇತ್ರಗಳಲ್ಲಿ ಅವಿಸ್ಮರಣೀಯ ಸೇವೆ ಸಲ್ಲಿಸಿ ಅಗಲಿರುವ ಗಣ್ಯ ವ್ಯಕ್ತಿಗಳ ಬದುಕು ಹಾಗೂ ಸಾಧನೆಗಳನ್ನು ಮರೆಯಲಾಗದ ಮಹನೀಯರು ಕಾರ್ಯಕ್ರಮದಲ್ಲಿ ಸ್ಮರಿಸಲಾಗುವುದು. ಸೆಪ್ಟೆಂಬರ್‌ 6ರಂದು ಈ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಗುವುದು ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ನಿರ್ದೇಶಕ ವೈ. ಕೆ. ಮುದ್ದುಕೃಷ್ಣ http://www.thatskannada.com ತಿಳಿಸಿದ್ದಾರೆ.

ಪ್ರತಿ ತಿಂಗಳ ಮೊದಲ ಶನಿವಾರ ಮರೆಯಲಾಗದ ಮಹನೀಯರು ಕಾರ್ಯಕ್ರಮ ನಡೆಯಲಿದ್ದು , ಸೆಪ್ಟೆಂಬರ್‌ 6ರ ಮೊದಲ ಕಾರ್ಯಕ್ರಮದಲ್ಲಿ ಕನ್ನಡದ ಕಣ್ವ ಬಿ.ಎಂ.ಶ್ರೀಕಂಠಯ್ಯ ಅವರ ಬಗ್ಗೆ ಕಾರ್ಯಕ್ರಮ ಆಯೋಜಿಸಲಾಗಿದೆ.

ಮನೆಯಂಗಳದಲ್ಲಿ ಭೈರಪ್ಪ : ಸೆಪ್ಟೆಂಬರ್‌ ತಿಂಗಳ ಮೂರನೇ ಶನಿವಾರದಂದು ನಡೆಯುವ ಮನೆಯಂಗಳದಲ್ಲಿ ಮಾತುಕತೆ ಕಾರ್ಯಕ್ರಮದಲ್ಲಿ ಖ್ಯಾತ ಕಾದಂಬರಿಕಾರ ಎಸ್‌. ಎಲ್‌. ಭೈರಪ್ಪ ಅತಿಥಿಯಾಗಿ ಭಾಗವಹಿಸುವರು.

(ಇನ್ಫೋ ವಾರ್ತೆ)

ಮುಖಪುಟ / ವಾರ್ತೆಗಳು

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+